Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:17 - ಪರಿಶುದ್ದ ಬೈಬಲ್‌

17 ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಈ ಕಾರ್ಯವು ನಡೆಯಿತು. ಹದಿನಾಲ್ಕನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಆ ದಿವಸವನ್ನು ಯೆಹೂದ್ಯರು ತಮ್ಮ ಸಂತಸದ ದಿನವಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದು ನಡೆದದ್ದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ. ಅವರು ಹದಿನಾಲ್ಕನೆಯ ದಿನದಂದು ವಿಶ್ರಮಿಸಿದರು. ಅಂದು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದು ಫಾಲ್ಗುನಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರವಿುಸಿಕೊಂಡು ಆ ದಿವಸವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದಾರ್ ಮಾಸದ ಹದಿಮೂರನೆಯ ದಿನ ಈ ಘಟನೆ ನಡೆಯಿತು. ಹದಿನಾಲ್ಕನೆಯ ದಿನದಂದು ಅವರು ವಿಶ್ರಮಿಸಿಕೊಂಡು, ಅದನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:17
5 ತಿಳಿವುಗಳ ಹೋಲಿಕೆ  

ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಯೆಹೂದ್ಯರ ವೈರಿಗಳು ರಾಜಾಜ್ಞೆಗನುಸಾರವಾಗಿ ಯೆಹೂದ್ಯರನ್ನು ನಿರ್ನಾಮ ಮಾಡಬೇಕಾಗಿತ್ತು. ಅವರು ಆ ದಿವಸಕ್ಕಾಗಿ ಕಾಯುತ್ತಿರುವಾಗ ಪರಿಸ್ಥಿತಿಯು ಬದಲಾಯಿತು. ಯೆಹೂದ್ಯರು ಅವರ ಶತ್ರುಗಳಿಗಿಂತ ಬಲಾಢ್ಯರಾದರು.


ಅದರಲ್ಲಿ ಅವನು ಯೆಹೂದ್ಯರೆಲ್ಲರೂ ಪ್ರತೀ ವರ್ಷ ಅದಾರ್ ತಿಂಗಳಿನ ಹದಿನಾಲ್ಕನೇ ಮತ್ತು ಹದಿನೈದನೇ ದಿವಸಗಳನ್ನು ಪೂರಿಮ್ ದಿವಸಗಳನ್ನಾಗಿ ಆಚರಿಸಬೇಕು ಎಂಬದಾಗಿ ಆದೇಶ ನೀಡಿದನು.


ಅದಾರ್ ತಿಂಗಳಿನ ಹದಿಮೂರನೇ ಮತ್ತು ಹದಿನಾಲ್ಕನೇ ದಿವಸಗಳಲ್ಲಿ ಶೂಷನ್ ನಗರದ ಯೆಹೂದ್ಯರು ಒಟ್ಟಾಗಿ ಸೇರಿಬಂದಿದ್ದರಿಂದ ಹದಿನೈದನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಹದಿನೈದನೆಯ ದಿವಸವನ್ನು ಅವರು ಸಂತಸದ ಹಬ್ಬವನ್ನಾಗಿ ಮಾಡಿದರು.


ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.


ಮೊದಲನೆ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು ಆಯಾಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು