Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:21 - ಪರಿಶುದ್ದ ಬೈಬಲ್‌

21 ಅದರಲ್ಲಿ ಅವನು ಯೆಹೂದ್ಯರೆಲ್ಲರೂ ಪ್ರತೀ ವರ್ಷ ಅದಾರ್ ತಿಂಗಳಿನ ಹದಿನಾಲ್ಕನೇ ಮತ್ತು ಹದಿನೈದನೇ ದಿವಸಗಳನ್ನು ಪೂರಿಮ್ ದಿವಸಗಳನ್ನಾಗಿ ಆಚರಿಸಬೇಕು ಎಂಬದಾಗಿ ಆದೇಶ ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವುದು ಶಾಶ್ವತನಿಯಮ ಎಂದೆಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ‘ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆ ಮತ್ತು ಹದಿನೈದನೆಯ ದಿನಗಳನ್ನು ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮ ಎಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪ್ರತಿವರುಷವೂ ಫಾಲ್ಗುನಮಾಸದ ಹದಿನಾಲ್ಕನೆಯ ಮತ್ತು ಹದಿನೈದನೆಯ ದಿನಗಳನ್ನು ಉತ್ಸವದಿನಗಳನ್ನಾಗಿ ಆಚರಿಸುವದು ಶಾಶ್ವತನಿಯಮ ಎಂದೆಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆ ಮತ್ತು ಹದಿನೈದನೆ ದಿನಗಳನ್ನೂ ಪ್ರತಿವರ್ಷ ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮವೆಂದು ಭಾವಿಸುವಂತೆ ಆ ಪತ್ರದಲ್ಲಿ ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:21
8 ತಿಳಿವುಗಳ ಹೋಲಿಕೆ  

ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಈ ಕಾರ್ಯವು ನಡೆಯಿತು. ಹದಿನಾಲ್ಕನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಆ ದಿವಸವನ್ನು ಯೆಹೂದ್ಯರು ತಮ್ಮ ಸಂತಸದ ದಿನವಾಗಿ ಆಚರಿಸಿದರು.


ಅದಾರ್ ತಿಂಗಳಿನ ಹದಿಮೂರನೇ ಮತ್ತು ಹದಿನಾಲ್ಕನೇ ದಿವಸಗಳಲ್ಲಿ ಶೂಷನ್ ನಗರದ ಯೆಹೂದ್ಯರು ಒಟ್ಟಾಗಿ ಸೇರಿಬಂದಿದ್ದರಿಂದ ಹದಿನೈದನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಹದಿನೈದನೆಯ ದಿವಸವನ್ನು ಅವರು ಸಂತಸದ ಹಬ್ಬವನ್ನಾಗಿ ಮಾಡಿದರು.


ನಡೆದ ಸಂಗತಿಗಳನ್ನೆಲ್ಲಾ ಮೊರ್ದೆಕೈ ಬರೆದಿಟ್ಟು ಅಹಷ್ವೇರೋಷನ ಸಾಮ್ರಾಜ್ಯದಲ್ಲಿ ವಾಸಿಸಿದ್ದ ಎಲ್ಲಾ ಯೆಹೂದ್ಯರಿಗೆ, ದೂರ ಮತ್ತು ಹತ್ತಿರದಲ್ಲಿರುವ ಯೆಹೂದ್ಯರಿಗೂ ಪತ್ರ ಬರೆಯಿಸಿದನು.


ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.


ಹಾಗೆ, ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಮತ್ತು ಯೆಹೂದಿಯಾದ ಮೊರ್ದೆಕೈಯು ಈ ಪೂರಿಮ್ ಹಬ್ಬದ ಬಗ್ಗೆ ಒಂದು ಅಧಿಕೃತ ಪತ್ರವನ್ನು ಬರೆಯಿಸಿದರು. ಜನರು ಅವರ ಎರಡನೆಯ ಪತ್ರವನ್ನು ಸತ್ಯವೆಂದು ನಂಬುವ ಹಾಗೆ ರಾಜಮುದ್ರೆಯೊಂದಿಗೆ ಕಳುಹಿಸಿದರು.


ಆದಾರ್ ತಿಂಗಳಿನ ಮೂರನೆಯ ದಿನದಲ್ಲಿ ಅಂದರೆ ರಾಜ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದಲ್ಲಿ ದೇವಾಲಯವು ಸಂಪೂರ್ಣವಾಯಿತು.


ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆ ತಿಂಗಳಾದ ನೀಸಾನ್ ತಿಂಗಳಲ್ಲಿ ಒಂದು ನಿರ್ದಿಷ್ಟ ದಿವಸಕ್ಕಾಗಿ ಹಾಮಾನನು ಚೀಟು ಹಾಕಿದನು. ಆಗ ಹನ್ನೆರಡನೆ ತಿಂಗಳಾದ ಅದಾರ್ ಮಾಸವು ಆರಿಸಲ್ಪಟ್ಟಿತು. (ಆ ದಿವಸಗಳಲ್ಲಿ ಚೀಟು ಹಾಕುವದಕ್ಕೆ “ಪೂರ್” ಎಂದು ಅನ್ನುತ್ತಿದ್ದರು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು