Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:3 - ಪರಿಶುದ್ದ ಬೈಬಲ್‌

3 ಅಲ್ಲದೆ ಸಂಸ್ಥಾನಗಳಲ್ಲಿದ್ದ ಅಧಿಕಾರಿಗಳು, ರಾಜ್ಯಪಾಲರು, ಆಡಳಿತಾಧಿಕಾರಿಗಳು ಯೆಹೂದ್ಯರಿಗೆ ನೆರವಾದರು. ಯಾಕೆಂದರೆ ಅವರು ಮೊರ್ದೆಕೈಗೆ ಹೆದರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಅಧಿಕಾರ ಪ್ರಬಲವಾಗುತ್ತಾ ಬಂದುದರಿಂದ ಅವನ ಕೀರ್ತಿ ಎಲ್ಲಾ ಸಂಸ್ಥಾನಗಳಲ್ಲಿಯೂ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಗಿತ್ತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದಹಾಗೆಲ್ಲಾ ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:3
9 ತಿಳಿವುಗಳ ಹೋಲಿಕೆ  

ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.


ಅರಸನು ಆ ವಿಗ್ರಹದ ಪ್ರತಿಷ್ಠಾಪನೆಯ ಮಹೋತ್ಸವಕ್ಕೆ ಉಪರಾಜರನ್ನು, ನಾಯಕರನ್ನು, ದೇಶಾಧಿಪತಿಗಳನ್ನು, ಮಂತ್ರಿಗಳನ್ನು, ಕೋಶಾಧ್ಯಕ್ಷರನ್ನು, ನ್ಯಾಯಾಧಿಪತಿಗಳನ್ನು ಮತ್ತು ಉಳಿದೆಲ್ಲ ಅಧಿಕಾರಿಗಳನ್ನು ಕರೆಸಿದನು.


ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು.


ಆಕೆ ಅರಸನಿಗೆ, “ನೀವು ನನ್ನನ್ನು ಇಷ್ಟಪಡುವುದಾದರೆ ಮತ್ತು ನಿಮಗೆ ಮೆಚ್ಚಿಕೆಯಾದರೆ ನೀವು ನನ್ನ ಈ ಬಿನ್ನಹವನ್ನು ಪೂರೈಸಬೇಕು. ಅದೇನೆಂದರೆ, ರಾಜನ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ನಾಶಮಾಡಬೇಕೆಂದು ಹಾಮಾನನು ಹೊರಡಿಸಿರುವ ಆಜ್ಞೆಯನ್ನು ರದ್ದುಮಾಡಲು ನೀವು ಇನ್ನೊಂದು ಆಜ್ಞೆಯನ್ನು ಹೊರಡಿಸಬೇಕು.


ಮೊದಲನೆ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು ಆಯಾಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು.


ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:


ರಾಜನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿ ಎಲ್ಲೆಲ್ಲಿ ರಾಜಶಾಸನವು ತಲಪಿತೋ ಅಲ್ಲಲ್ಲಿ ಯೆಹೂದ್ಯರೆಲ್ಲರೂ ಆನಂದದಿಂದ ನಲಿದಾಡಿದರು. ಅದು ಅವರಿಗೆ ಅತ್ಯಂತ ಸಂತಸದ ದಿವಸವಾಗಿತ್ತು. ತಮ್ಮತಮ್ಮ ಮನೆಗಳಲ್ಲಿ ಔತಣ ಸಿದ್ಧಪಡಿಸಿದರು. ಸಾಮಾನ್ಯ ಜನರಲ್ಲಿ ಎಷ್ಟೋ ಮಂದಿ ಯೆಹೂದ್ಯ ಮತಾವಲಂಭಿಗಳಾದರು. ಯಾಕೆಂದರೆ ಅವರು ಯೆಹೂದ್ಯರಿಗೆ ತುಂಬಾ ಹೆದರಿ ಆ ರೀತಿಯಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು