Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:17 - ಪರಿಶುದ್ದ ಬೈಬಲ್‌

17 ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರುವರು. ಯಾಕೋಬನ ಜನರು ತಮಗೆ ಸೇರಿರುವದನ್ನು ಹಿಂದಕ್ಕೆ ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು; ಆ ಪರ್ವತವು ಮೀಸಲಾಗಿರುವದು; ಯಾಕೋಬನ ವಂಶದವರು ತಮ್ಮ ಸ್ವಾಸ್ತ್ಯಗಳನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:17
25 ತಿಳಿವುಗಳ ಹೋಲಿಕೆ  

ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಈ ಭೂಮುಖದಿಂದ ಅಳಿಸಿಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.


ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು. ಚೀಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ಷಿಸಲ್ಪಟ್ಟ ಜನರಿರುವರು. ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. ಉಳಿದ ಜನರಲ್ಲಿ ಯೆಹೋವನು ಕರೆದಿರುವ ಜನರು ಸೇರಿಕೊಂಡಿರುವರು.


“ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”


ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”


ದೇವರು ಒಳ್ಳೆಯವನು; ನ್ಯಾಯವನ್ನೇ ಮಾಡುವವನು; ಆತನು ಚೀಯೋನನ್ನೂ ತನ್ನ ಬಳಿಗೆ ಬರುವ ಜನರನ್ನೂ ರಕ್ಷಿಸಿ ಕಾಪಾಡುವನು.


ಯೆಹೋವನು ಹೇಳುವುದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವುದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವುದು.”


ಕೆಲವು ಯೆಹೂದಿಯರು ಖಡ್ಗದಿಂದ ತಪ್ಪಿಸಿಕೊಳ್ಳುವರು. ಅವರು ಈಜಿಪ್ಟಿನಿಂದ ಯೆಹೂದಕ್ಕೆ ಹಿಂದಿರುಗಿ ಬರುವರು. ಆದರೆ ಹಾಗೆ ತಪ್ಪಿಸಿಕೊಳ್ಳುವ ಯೆಹೂದಿಯರು ಬಹು ಕಡಿಮೆ. ಆಗ ಈಜಿಪ್ಟಿಗೆ ವಲಸೆ ಬಂದ ಆ ಅಳಿದುಳಿದ ಯೆಹೂದಿಯರಿಗೆ ಯಾರ ಮಾತು ನಿಜವೆಂಬುದು ತಿಳಿದು ಬರುತ್ತದೆ. ನನ್ನ ಮಾತು ನಿಜವಾಯಿತೋ ಅಥವಾ ಅವರ ಮಾತು ನಿಜವಾಯಿತೋ ಎಂಬುದು ಅವರಿಗೆ ಗೊತ್ತಾಗುತ್ತದೆ.


ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು, ಆದರೆ ತಪ್ಪಿಸಿಕೊಂಡ ಸ್ವಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”


“ಆದರೂ ಕೆಲವರು ತಪ್ಪಿಸಿಕೊಳ್ಳುವರು. ಅವರು ಬೆಟ್ಟಕ್ಕೆ ಓಡುವರು. ಆದರೆ ಅವರು ಸಂತೋಷಪಡುವುದಿಲ್ಲ. ತಮ್ಮ ಪಾಪಗಳಿಗಾಗಿ ಅವರು ದುಃಖಿತರಾಗುವರು. ಪಾರಿವಾಳಗಳಂತೆ ಮೂಲುಗುವರು, ಅಳುವರು.


ಯೆಹೋವನು ಚೀಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು!


ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.


“ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.


ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.


ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’


ಹೌದು, ನಾನು ಅನೇಕಾನೇಕ ಇಸ್ರೇಲ್ ಜನರನ್ನು ನಿನ್ನ ದೇಶಕ್ಕೆ ನಡೆಸುವೆನು. ನೀನು ಅವರ ಸೊತ್ತಾಗುವೆ. ಅವರ ಮಕ್ಕಳನ್ನು ನೀನು ಮತ್ತೆಂದಿಗೂ ತೆಗೆದುಹಾಕುವುದಿಲ್ಲ.”


ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು.


ನೀವು ನನ್ನ ಬೆಳ್ಳಿಬಂಗಾರವನ್ನು ಕದ್ದುಕೊಂಡು ಹೋದಿರಿ. ನನ್ನ ಅಮೂಲ್ಯವಾದ ಸಂಪತ್ತನ್ನು ಕೊಂಡು ಹೋಗಿ ನಿಮ್ಮ ಪೂಜಾಸ್ಥಳಗಳಲ್ಲಿ ಇಟ್ಟಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು