Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:18 - ಪರಿಶುದ್ದ ಬೈಬಲ್‌

18 ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಎದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಎದೋಮನನ್ನು ನಾಶಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾಕೋಬನ ವಂಶವು ಅಗ್ನಿ, ಯೋಸೇಫನ ವಂಶವು ಜ್ವಾಲೆ, ಏಸಾವನ ವಂಶವು ಕೂಳೆ; ಆ ಅಗ್ನಿಜ್ವಾಲೆಗಳು ಕೂಳೆಯಲ್ಲಿ ಧಗಧಗಿಸುತ್ತಾ ಅದನ್ನು ನುಂಗಿಬಿಡುವವು; ಏಸಾವನ ವಂಶದವರಲ್ಲಿ ಯಾರೂ ಉಳಿಯರು; ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:18
23 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ಮತ್ತೆ ನೆಮ್ಮದಿಯಿಂದ ವಾಸಿಸುವರು.”


ಇಸ್ರೇಲಿನ ಬೆಳಕು ಬೆಂಕಿಯಂತಿದೆ. ಪರಿಶುದ್ಧನಾಗಿರುವಾತನು ಬೆಂಕಿಯ ಜ್ವಾಲೆಯಂತಿದ್ದಾನೆ. ಮೊದಲು ಹಣಜಿ ಕಸಕಡ್ಡಿಗಳನ್ನು ಸುಡುವ ಬೆಂಕಿಯಂತೆ ಆತನಿರುವನು.


ಆದರೆ ಜನಾಂಗಗಳಲ್ಲಿ ಚದರಿರುವ ಯಾಕೋಬನ ವಂಶದ ಅಳಿದುಳಿದವರು, ಕಾಡಿನಲ್ಲಿರುವ ಪ್ರಾಣಿಗಳಲ್ಲಿ ಸಿಂಹವು ಹೇಗೆ ಇರುವದೋ, ಹಾಗೆಯೇ ಇರುವರು. ಕುರಿಗಳ ಹಿಂಡಿನ ಮಧ್ಯೆಯಿರುವ ಪ್ರಾಯದ ಸಿಂಹದಂತಿರುವರು. ಅದು ತನಗೆ ಇಷ್ಟ ಬಂದಂತೆ ತಿರುಗಾಡುವದು. ಅದು ಒಂದು ಪ್ರಾಣಿಯನ್ನು ಹಿಡಿದರೆ ಅದನ್ನು ಬಿಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜನಶೇಷವು ಅದರಂತಿರುವದು.


ಅವರಿಗೆ ಹೀಗೆ ಹೇಳು: ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಯೋಸೇಫನ ದಂಡವನ್ನು ಎಫ್ರಾಯೀಮ್ ಮತ್ತು ಅವನ ಸ್ನೇಹಿತರಾದ ಇಸ್ರೇಲರ ಕೈಯಿಂದ ತೆಗೆದುಕೊಂಡು ಅದನ್ನು ಯೆಹೂದದ ದಂಡದೊಂದಿಗೆ ಇಟ್ಟು ಒಂದೇ ದಂಡವಾಗುವಂತೆ ಮಾಡುವೆನು. ಅವು ನನ್ನ ಕೈಯಲ್ಲಿ ಒಂದೇ ದಂಡವಾಗುತ್ತವೆ.’


ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.


ಒಬ್ಬ ವ್ಯಕ್ತಿಯು ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಮರ, ಹುಲ್ಲು ಮತ್ತು ಜೊಂಡುಗಳಿಂದ ಕಟ್ಟಬಹುದು.


ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.


ಯಾಕೆಂದರೆ ನನ್ನ ಪರಿಶುದ್ಧ ಪರ್ವತದಲ್ಲಿ ರಕ್ತವನ್ನು ಸುರಿಸಿದೆ. ನೀನು ಹುಟ್ಟಲೇ ಇಲ್ಲ ಎಂಬುದಾಗಿ ಅನಿಸುವದು. ಆದ್ದರಿಂದ ಇತರ ಜನಾಂಗಗಳು ನಿನ್ನ ರಕ್ತವನ್ನು ಸುರಿಸುತ್ತವೆ. ನೀನು ಕೊನೆಗೊಳ್ಳುವೆ.


ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ.


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ಕಿವಿಗೊಟ್ಟು ಕೇಳಿರಿ. ಪರ್ವತಗಳ ಮೇಲೆ ಓಡುವ ರಥಗಳ ಶಬ್ದದಂತೆ ಅವರ ಶಬ್ದವು ಕೇಳುತ್ತದೆ. ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ ಅವರ ಶಬ್ದವು ಕೇಳುತ್ತದೆ. ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ.


“ನರಪುತ್ರನೇ, ಒಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಈ ದಂಡವು ಯೆಹೂದನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ. ಆಮೇಲೆ ಇನ್ನೊಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯಿಮನ ಈ ದಂಡವು ಯೋಸೇಫನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ.


ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. ಅವರು ಹುಲ್ಲಿನಂತೆ ಸುಟ್ಟುಹೋಗುವರು. ರೊಟ್ಟಿಸುಡಲು ಕೆಂಡಗಳು ಕಾಣಿಸದಂತೆಯೂ ಚಳಿ ಕಾಯಿಸಿಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟುಹೋಗುವರು.


ಅವರ ಸುರಕ್ಷತೆಯ ಸ್ಥಳ ನಾಶವಾಗುವದು. ಅವರ ಅಧಿಪತಿಗಳು ಧ್ವಜವನ್ನು ಬಿಟ್ಟು ಸೋತುಹೋಗುವರು. ಯೆಹೋವನೇ ಇದನ್ನು ನುಡಿದಿದ್ದಾನೆ. ಆತನ ಅಗ್ನಿವೇದಿಕೆಯು ಚೀಯೋನಿನಲ್ಲಿದೆ. ಆತನ ಒಲೆಯು ಜೆರುಸಲೇಮಿನಲ್ಲಿದೆ.


ನಾನು ಪಾಪಮಾಡಿದ್ದೇನೆಂದು ಒಪ್ಪಿಕೊಳ್ಳುತ್ತೇನೆ. ಆದ ಕಾರಣವೇ, ನನ್ನ ರಾಜನಾದ ಒಡೆಯನೇ, ನಿನ್ನನ್ನು ಭೇಟಿಮಾಡಲು ಬಂದ ಯೋಸೇಫ್ಯರ ಕುಲದಲ್ಲಿ ನಾನೇ ಮೊದಲಿಗನು” ಎಂದು ಹೇಳಿದನು.


ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.


ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ.


ಅನಾತೋತ್ ನಗರದಲ್ಲಿ ಒಬ್ಬನೂ ಉಳಿಯುವುದಿಲ್ಲ; ಯಾರೂ ಬದುಕುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು.


ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.


“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆದ್ದರಿಂದ ಜನರು ಹುಲ್ಲನ್ನು ಹುಡುಕುತ್ತಾ ಈಜಿಪ್ಟಿನ ಪ್ರತಿಯೊಂದು ಕಡೆಗೂ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು