Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:19 - ಪರಿಶುದ್ದ ಬೈಬಲ್‌

19 ಆಗ ನೆಗೆವಿನ ಜನರು ಏಸಾವಿನ ಪರ್ವತಗಳಲ್ಲಿ ವಾಸಿಸುವರು. ಬೆಟ್ಟದ ಕೆಳಗೆ ವಾಸಿಸುವವರು ಫಿಲಿಷ್ಟಿಯರ ದೇಶವನ್ನು ಆಕ್ರಮಿಸುವರು. ಎಫ್ರಾಯೀಮ್ ಮತ್ತು ಸಮಾರ್ಯದ ಜನರು ಜೀವಿಸುವರು. ಗಿಲ್ಯಾದ್ ಪ್ರಾಂತ್ಯವು ಬೆನ್ಯಾಮೀನರಿಗೆ ಸೇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ದಕ್ಷಿಣ ಪ್ರಾಂತ್ಯದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು, ಇಳಕಲಿನ ಪ್ರದೇಶದವರು ಫಿಲಿಷ್ಟಿಯರನ್ನೂ, ಎಫ್ರಾಯೀಮಿನ ಭೂಮಿಯನ್ನೂ ಮತ್ತು ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು. ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ದಕ್ಷಿಣವಲಯದವರು ಏಸಾವಿನ ಪರ್ವತವನ್ನು ಸ್ವಾಧೀನಪಡಿಸಿಕೊಳ್ಳುವರು. ಪಶ್ಚಿಮದ‌ ಬಯಲು ಸೀಮೆಯವರು ಫಿಲಿಷ್ಟಿಯವನ್ನೂ ಎಫ್ರಯಿಮ್ ಮತ್ತು ಸಮಾರ್ಯದ ಭೂಮಿಯನ್ನೂ ವಶಪಡಿಸಿಕೊಳ್ಳುವರು. ಬೆನ್ಯಾಮಿನ ವಂಶಜರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ದಕ್ಷಿಣಪ್ರಾಂತದವರು ಏಸಾವಿನ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವರು; ಇಳಕಲಿನ ಪ್ರದೇಶದವರು ಫಿಲಿಷ್ಟಿಯವನ್ನೂ ಎಫ್ರಾಯೀವಿುನ ಭೂವಿುಯನ್ನೂ ಸಮಾರ್ಯದ ನೆಲವನ್ನೂ ವಶಮಾಡಿಕೊಳ್ಳುವರು; ಬೆನ್ಯಾಮೀನಿನವರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದಕ್ಷಿಣದವರು ಏಸಾವನ ಬೆಟ್ಟವನ್ನೂ ಬಯಲಿನವರು ಫಿಲಿಷ್ಟಿಯರ ದೇಶವನ್ನೂ ಸ್ವತಂತ್ರಿಸಿಕೊಳ್ಳುವರು. ಎಫ್ರಾಯೀಮಿನ ಹೊಲಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನಮಾಡಿಕೊಳ್ಳುವರು ಬೆನ್ಯಾಮೀನನು ಗಿಲ್ಯಾದನ್ನು ವಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:19
33 ತಿಳಿವುಗಳ ಹೋಲಿಕೆ  

ಆಗ ಎದೋಮಿನಲ್ಲಿ ಉಳಿದವರು ಮತ್ತು ನನ್ನ ಹೆಸರಿನಿಂದ ಕರೆಯಲ್ಪಟ್ಟ ಜನರು ಸಹಾಯಕ್ಕಾಗಿ ಯೆಹೋವನನ್ನು ನೋಡುವರು.” ಇದು ಯೆಹೋವನ ನುಡಿ. ಆತನು ಅವುಗಳನ್ನು ನೆರವೇರಿಸುವನು.


ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.


ಆಗ ನಾನು ನಿಮ್ಮ ಪೂರ್ವಿಕರಿಗೆ ಕೊಟ್ಟ ದೇಶದಲ್ಲಿ ನೀವು ಬಾಳುವಿರಿ. ನೀನು ನನ್ನ ಜನರಾಗುವಿರಿ. ನಾನು ನಿಮ್ಮ ದೇವರಾಗಿರುವೆನು.”


ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.


ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.


ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನ್ನು ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನ್ನು ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನ್ನೆಲ್ಲಾ ನಾಶಮಾಡುವೆನು.


ಈ ಸಂದೇಶ ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಹೀಗೆ ಹೇಳಿದನು: “ಅಮ್ಮೋನ್ಯರೇ, ಇಸ್ರೇಲಿನ ಜನರಿಗೆ ಮಕ್ಕಳಿಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ತಂದೆತಾಯಿಗಳು ಸತ್ತಮೇಲೆ ಭೂಮಿಯನ್ನು ತೆಗೆದುಕೊಳ್ಳುವದಕ್ಕೆ ಅವರ ವಾರಸುದಾರರು ಇಲ್ಲವೆಂದು ನೀವು ತಿಳಿದುಕೊಂಡಿರುವಿರೇನು? ಅದಕ್ಕಾಗಿಯೇ ಮಲ್ಕಾಮ್ ದೇವತೆಯು ಗಾದನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಳೇ?”


ಯೆಹೋವನು ಚೀಯೋನನ್ನು ರಕ್ಷಿಸುವನು! ಆತನು ಯೆಹೂದದ ಪಟ್ಟಣಗಳನ್ನು ಮತ್ತೆ ಕಟ್ಟುವನು. ಆತನ ಜನರು ಅಲ್ಲಿ ವಾಸವಾಗಿದ್ದು ಸ್ವದೇಶವಾಗಿ ಮಾಡಿಕೊಳ್ಳುವರು!


ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.


ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.


ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು.


ಯೆಹೂದ ಕುಲದವರು ಪಶ್ಚಿಮ ದಿಕ್ಕಿನ ಇಳಕಲಿನ ಪ್ರದೇಶದಲ್ಲಿಯೂ ಕೆಲವು ಊರುಗಳನ್ನು ಪಡೆದಿದ್ದರು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಎಷ್ಟಾವೋಲ್, ಚೊರ್ಗಾ, ಅಶ್ನಾ,


ಯೆಹೂದ ಕುಲವು ನೆಗೆವ್ ದಕ್ಷಿಣಭಾಗದಲ್ಲಿದ್ದ ಎಲ್ಲ ಊರುಗಳನ್ನು ಪಡೆಯಿತು. ಈ ಊರುಗಳು ಎದೋಮಿನ ಸೀಮೆಯ ಹತ್ತಿರ ಇದ್ದವು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಕಬ್ಜೇಲ್, ಏದೆರ್, ಯಾಗೂರ್,


ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು.


ಮೋಶೆ ಅವರಿಗೆ ಯಗ್ಜೇರಿನ ಪ್ರದೇಶ ಮತ್ತು ಗಿಲ್ಯಾದಿನ ಎಲ್ಲ ಪಟ್ಟಣಗಳನ್ನೂ ರಬ್ಬಾದ ಹತ್ತಿರವಿದ್ದ ಅರೋಯೇರ್‌ವರೆಗಿನ ಅಮ್ಮೋನಿಯರ ಅರ್ಧಪ್ರದೇಶವನ್ನು ಕೊಟ್ಟನು.


ಯೋಸೇಫನ ಮಗನಾದ ಎಫ್ರಾಯೀಮ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು