Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 1:1 - ಪರಿಶುದ್ದ ಬೈಬಲ್‌

1 ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 1:1
52 ತಿಳಿವುಗಳ ಹೋಲಿಕೆ  

ಜ್ಞಾನಿಗಳೊಂದಿಗೆ ಸ್ನೇಹದಿಂದಿರಿ. ಆಗ ನೀವೂ ಜ್ಞಾನಿಗಳಾಗುವಿರಿ. ಆದರೆ ನೀವು ಜ್ಞಾನಹೀನರನ್ನು ನಿಮ್ಮ ಸ್ನೇಹಿತರನ್ನಾಗಿ ಆಯ್ದುಕೊಂಡರೆ, ನಿಮಗೆ ತೊಂದರೆ ಉಂಟಾಗುವುದು.


ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.


ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು.


ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೋ ನಾಶಪಡಿಸುವನು.


ನನ್ನ ಮಗನೇ, ಅವರ ಜೀವಿತವನ್ನು ಅನುಸರಿಸಬೇಡ. ಅವರ ಜೀವಿತಮಾರ್ಗದಲ್ಲಿ ಮೊದಲನೆ ಹೆಜ್ಜೆಯನ್ನೂ ಇಡಬೇಡ.


ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.


ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.


ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.


“ತಮ್ಮ ಏಳಿಗೆಗೆ ಕಾರಣ ತಾವೇ ಎಂದು ದುಷ್ಟರು ಯೋಚಿಸಿಕೊಂಡಿದ್ದಾರೆ. ಆದರೆ ಅವರ ಆಲೋಚನೆಗಳನ್ನು ನಾನು ತಿರಸ್ಕರಿಸುವೆ.


ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು.


ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು.


ಆದರೆ ಯೆಹೋವನಲ್ಲಿ ನಂಬಿಕೆಯುಳ್ಳ ಮನುಷ್ಯನು ದೇವರ ಕೃಪೆಗೆ ಪಾತ್ರನಾಗುವನು. ಏಕೆಂದರೆ ತಾನು ನಂಬಿಕೆಯುಳ್ಳವನೆಂದು ಅವನು ಯೆಹೋವನಿಗೆ ತೋರಿಸಿಕೊಡುವನು.


ಜನರು ಜಾಣನನ್ನು ಗೌರವಿಸುತ್ತಾರೆ. ಆದರೆ ನಂಬಿಕೆಗೆ ಯೋಗ್ಯನಲ್ಲದವನು ತೊಂದರೆಗೆ ಒಳಗಾಗುವನು.


ಕೆಡುಕರನ್ನು ನನ್ನ ಬಳಿಗೆ ಬರಗೊಡಿಸಬೇಡ. ಆಗ ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.


ದೇವರ ಆಜ್ಞೆಗಳಿಗೆ ವಿಧೇಯರಾಗಿರುವವರು ಭಾಗ್ಯವಂತರೇ ಸರಿ! ಅವರು ಸತ್ಕಾರ್ಯಗಳನ್ನು ಯಾವಾಗಲೂ ಮಾಡುತ್ತಿರುವರು.


ನಾನು ಎಲ್ಲಾ ಅಪಾಯಗಳಿಂದ ಪಾರಾಗಿದ್ದೇನೆ. ಯೆಹೋವನೇ, ನಿನ್ನ ಭಕ್ತರ ಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು.


ಹೀಗೆ ನೀನು ದುರ್ಮಾರ್ಗಗಳಿಂದಲೂ ಸುಳ್ಳುಗಾರರಿಂದಲೂ ತಪ್ಪಿಸಿಕೊಳ್ಳುವೆ.


ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.


ಆದರೆ ದುಷ್ಟರ ಜೀವಿತವು ರಾತ್ರಿಯ ಕತ್ತಲೆಯಂತಿದೆ. ಅವರು ಕತ್ತಲೆಯಲ್ಲಿ ತಪ್ಪಿಸಿಕೊಂಡಿದ್ದು ತಮಗೆ ಕಾಣದ ವಸ್ತುಗಳ ಮೇಲೆ ಎಡವಿ ಬೀಳುತ್ತಾರೆ.


ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೋ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.


ನೀನು ಜ್ಞಾನಿಯಾಗಿದ್ದರೆ ನಿನ್ನ ಜ್ಞಾನವು ನಿನಗೇ ಲಾಭಕರ. ಆದರೆ ನೀನು ದುರಾಭಿಮಾನದಿಂದ ಬೇರೆಯವರನ್ನು ಗೇಲಿಮಾಡಿದರೆ ನಿನ್ನನ್ನೇ ಕಷ್ಟಕ್ಕೆ ಗುರಿಮಾಡಿಕೊಳ್ಳುವೆ.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ!


ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.


ಇಂಥ ಸುಸ್ಥಿತಿಯಲ್ಲಿರುವ ಜನರೇ ಧನ್ಯರು. ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರೇ ಭಾಗ್ಯವಂತರು.


ಯೇಸು ತೋಮನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದೆ. ನನ್ನನ್ನು ನೋಡದೆ ನಂಬುವವರು ನಿಜವಾಗಿಯೂ ಧನ್ಯರು” ಎಂದು ಹೇಳಿದನು.


“ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?


ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.


ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.


ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


ಯಾರಿಗೆ ದೇವರು ಸಹಾಯಕನೋ, ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.


ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.


ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”


ಅವರ ಮಕ್ಕಳಿಗೆ ನಾನು ಬುದ್ಧಿಹೇಳುತ್ತಾ, “ನಿಮ್ಮ ಪೂರ್ವಿಕರಂತೆ ನೀವಾಗಬೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನ್ನು ನೀವು ಅಶುದ್ಧಮಾಡಿಕೊಳ್ಳಬೇಡಿರಿ. ಅವರ ಕಟ್ಟಳೆಗಳನ್ನು ಅನುಸರಿಸಬೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಬೇಡಿರಿ.


ದುರಾಭಿಮಾನಿಯು ಶಿಕ್ಷೆಗೆ ಗುರಿಯಾಗಿ ದಂಡಿಸಲ್ಪಡುವನು; ಮೂಢನು ತನಗಾಗಿ ಕಾದಿರುವ ದಂಡನೆಯನ್ನು ಅನುಭವಿಸುವನು.


ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು. ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.


“ನಾನು ಸುಳ್ಳು ಹೇಳಲಿಲ್ಲ; ಜನರಿಗೆ ಮೋಸಮಾಡಲು ಪ್ರಯತ್ನಿಸಲೂ ಇಲ್ಲ.


ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯ ಬಗ್ಗೆ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ?


ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.


ಅಹಾಬನು ಮತ್ತು ಅವನ ಕುಟುಂಬದವರು ಜೀವಿಸಿದ ಪ್ರಕಾರವೇ ಅಹಜ್ಯನೂ ಜೀವಿಸಿದನು. ದುಷ್ಕೃತ್ಯಗಳನ್ನು ಮಾಡಲು ಅವನ ತಾಯಿಯೇ ಅವನನ್ನು ಪ್ರೋತ್ಸಾಹಿಸಿದಳು.


ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.


ಗೊರಸು ಸೀಳಿರುವ ಮತ್ತು ಮೆಲುಕು ಹಾಕುವ ಪ್ರಾಣಿಯನ್ನು ನೀವು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು