Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 1:3 - ಪರಿಶುದ್ದ ಬೈಬಲ್‌

3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 1:3
32 ತಿಳಿವುಗಳ ಹೋಲಿಕೆ  

ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.


ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಬೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣುಗಳನ್ನು ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಬರುತ್ತದೆ. ಅದರ ಹಣ್ಣುಗಳನ್ನು ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಧಿಯನ್ನೂ ತಯಾರಿಸಬಹುದು.”


ಅವರು ಮುಪ್ಪಿನಲ್ಲಿಯೂ ಪುಷ್ಟಿಯಾಗಿ ಬೆಳೆದಿರುವ ಎಲೆಮರಗಳಂತೆ ಫಲಿಸುವರು.


ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.


“‘ನಿನ್ನ ತಾಯಿಯು ನೀರಾವರಿಯಲ್ಲಿ ನೆಟ್ಟ ದ್ರಾಕ್ಷಾಲತೆಯಂತಿದ್ದಳು. ಬೇಕಾದಷ್ಟು ನೀರು ಇದ್ದುದರಿಂದ ಅದು ಫಲಭರಿತವಾಗಿದ್ದು ಅನೇಕ ಕೊಂಬೆಗಳನ್ನು ಹೊಂದಿತ್ತು.


ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು.


ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.


ಆ ದ್ರಾಕ್ಷಾಲತೆಯು ಸಮೃದ್ಧಿಕರವಾಗಿ ನೀರಿದ್ದ ಒಳ್ಳೆಯ ಭೂಮಿಯಲ್ಲಿ ನೆಡಲ್ಪಟ್ಟಿತ್ತು. ಕೊಂಬೆಗಳನ್ನು ಬೆಳೆಸಿ, ಹಣ್ಣುಗಳನ್ನು ಫಲಿಸಿ ಅಮೋಘವಾದ ದ್ರಾಕ್ಷಾಲತೆಯಾಗಬೇಕೆಂಬುದು ಅದರ ಬಯಕೆಯಾಗಿತ್ತು.’”


ಆದರೆ ಬಿಸಿಲೇರಿದಾಗ ಆ ಮೊಳಕೆಗಳು ಒಣಗಿಹೋದವು. ಏಕೆಂದರೆ ಅವುಗಳಿಗೆ ಆಳವಾದ ಬೇರಿರಲಿಲ್ಲ.


ಹಿಜ್ಕೀಯನು ತಾನು ಪ್ರಾರಂಭಿಸಿದ ಪ್ರತಿಯೊಂದು ಕಾರ್ಯಗಳನ್ನೂ ದೇವಾಲಯದ ಕಾರ್ಯಗಳನ್ನೂ ದೇವರ ಕಟ್ಟಳೆಗಳನ್ನೂ ಅನುಸರಿಸುವದನ್ನು ಪೂರ್ಣಹೃದಯದಿಂದ ಮಾಡಿ ಯಶಸ್ವಿಯಾದನು.


ಯೆಹೋವನು ಯೋಸೇಫನ ಸಂಗಡವಿದ್ದು ಅವನನ್ನು ಎಲ್ಲಾ ಕೆಲಸಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ಮಾಡುತ್ತಿರುವುದನ್ನು ಪೋಟೀಫರನು ಗಮನಿಸಿದನು.


ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು.


ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.


ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು.


ಅದು ನೀರಿನಿಂದ ಮತ್ತೆ ಹೊಸದಾಗಿ ಬೆಳೆಯುವುದು; ಎಳೆ ಗಿಡದಂತೆ ಕವಲೊಡೆಯುವುದು.


ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂದಾಗ ತನ್ನ ಪಾಲನ್ನು ತೆಗೆದುಕೊಂಡು ಬರಲು ಸೇವಕರನ್ನು ರೈತರ ಬಳಿಗೆ ಕಳುಹಿಸಿದನು.


ಆತನು ದಾರಿಯ ಪಕ್ಕದಲ್ಲಿದ್ದ ಒಂದು ಅಂಜೂರದ ಮರವನ್ನು ನೋಡಿ ಹಣ್ಣನ್ನು ತಿನ್ನಲು ಅದರ ಬಳಿಗೆ ಹೋದನು. ಆದರೆ ಮರದಲ್ಲಿ ಬರೀ ಎಲೆಗಳೇ ಇದ್ದವು. ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನೀನೆಂದಿಗೂ ಹಣ್ಣುಬಿಡದಂತಾಗಲಿ!” ಎಂದನು. ಆ ಕೂಡಲೇ ಅಂಜೂರದ ಮರ ಒಣಗಿಹೋಯಿತು.


ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.


“ಮಗನೇ, ನೀನು ದೇವಾಲಯವನ್ನು ಕಟ್ಟುವಾಗ ಯೆಹೋವನು ನಿನ್ನ ಸಂಗಡವಿದ್ದು ನಿನಗೆ ಯಶಸ್ಸನ್ನು ದಯಪಾಲಿಸಲಿ.


ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.


ಎಷ್ಟೋ ಜನರು ಜೆರುಸಲೇಮಿನಲ್ಲಿನ ದೇವರಾದ ಯೆಹೋವನಿಗೆ ಕಾಣಿಕೆಗಳನ್ನು ತಂದರು. ಹಾಗೆಯೇ ಅರಸನಾದ ಹಿಜ್ಕೀಯನಿಗೂ ಬೆಲೆಬಾಳುವ ವಸ್ತುಗಳನ್ನು ತಂದರು. ಅಂದಿನಿಂದ ಬೇರೆ ದೇಶದವರು ಹಿಜ್ಕೀಯನನ್ನು ಗೌರವಿಸಿದರು.


ನಿಮ್ಮ ಗುಡಾರಗಳು ಕಣಿವೆಗಳಂತೆ ಹರಡಿಕೊಂಡಿವೆ. ನಿಮ್ಮ ಗುಡಾರಗಳು ನದಿಯ ಬಳಿಯಿರುವ ತೋಟಗಳಂತಿವೆ. ನಿಮ್ಮ ಗುಡಾರಗಳು ಯೆಹೋವನು ನೆಟ್ಟ ಸುವಾಸನೆಯ ಪೊದೆಗಳಂತೆಯೂ ನೀರಿನ ಬಳಿಯಿರುವ ದೇವದಾರಿನ ಮರಗಳಂತೆಯೂ ಇವೆ.


“ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು.


ಯೆಹೋವನು ಹಿಜ್ಕೀಯನೊಂದಿಗಿದ್ದನು. ಹಿಜ್ಕೀಯನು ತಾನು ಮಾಡಿದ್ದರಲ್ಲೆಲ್ಲಾ ಜಯಗಳಿಸಿದನು. ಹಿಜ್ಕೀಯನು ಅಶ್ಶೂರದ ರಾಜನೊಂದಿಗಿದ್ದ ಸಂಬಂಧವನ್ನು ಕಡಿದುಹಾಕಿದನು. ಅಶ್ಶೂರದ ರಾಜನ ಸೇವೆಯನ್ನು ಹಿಜ್ಕೀಯನು ನಿಲ್ಲಿಸಿದನು.


ಯೆಹೋವನು ಮೋಶೆಗೆ ಕೊಟ್ಟಿರುವ ಕಟ್ಟಳೆಗಳನ್ನು ನೀನು ಜಾಗ್ರತೆಯಾಗಿ ಅನುಸರಿಸಿ ನಡೆದರೆ ನಿನಗೆ ಯಶಸ್ಸು ಪ್ರಾಪ್ತವಾಗುವುದು. ಸ್ಥಿರಚಿತ್ತನಾಗಿರು; ಧೈರ್ಯದಿಂದಿರು; ಹೆದರಬೇಡ; ಕಳವಳಪಡಬೇಡ.


ನಿನ್ನ ಕಾರ್ಯಗಳೆಲ್ಲಾ ಜಯಪ್ರಧವಾಗುವುದು; ನಿನ್ನ ಭವಿಷ್ಯತ್ತು ಪ್ರಕಾಶಮಾನವಾಗುವುದು;


ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು. ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪು ಮಾಡನು.


ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


ಯಾಕೆಂದರೆ ಈ ಮರವು ಬೇರೆ ಮರಗಳಿಗಿಂತ ಉನ್ನತವಾಗಿ ಕಾಣಿಸಿಕೊಳ್ಳಲು, ಅದು ಅನೇಕ ಕೊಂಬೆಗಳನ್ನು ಬಿಟ್ಟಿತು. ಅಲ್ಲಿ ಬೇಕಾದಷ್ಟು ನೀರು ಇದ್ದುದರಿಂದ ಕೊಂಬೆಗಳು ಉದ್ದವಾಗಿಯೂ ವಿಶಾಲವಾಗಿಯೂ ಬೆಳೆದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು