Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:12 - ಪರಿಶುದ್ದ ಬೈಬಲ್‌

12 ಯೆಹೋವನೇ, ಎದ್ದೇಳು, ಕಾರ್ಯನಿರತನಾಗು! ದೇವರೇ, ಆ ದುಷ್ಟರನ್ನು ದಂಡಿಸು! ನಿಸ್ಸಹಾಯಕರನ್ನು ಮರೆತುಬಿಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವುದಕ್ಕೆ ಕೈಚಾಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎದ್ದೇಳು ಪ್ರಭು, ದಲಿತನನು ಮರೆಯದಿರಯ್ಯಾ I ಆತನನು ರಕ್ಷಿಸಲು ದೇವಾ, ಕೈಚಾಚಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವದಕ್ಕೆ ಕೈಚಾಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರೇ, ಎದ್ದೇಳಿರಿ! ದೇವರೇ, ನಿಮ್ಮ ಕೈ ಎತ್ತಿರಿ. ನಿಸ್ಸಹಾಯಕರನ್ನು ಮರೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:12
15 ತಿಳಿವುಗಳ ಹೋಲಿಕೆ  

ನೀನು ನಿನ್ನ ವೈರಿಗಳ ಮೇಲೆ ಕೈ ಎತ್ತಿ ಅವರನ್ನು ನಾಶಮಾಡುವೆ.


ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.


ಯೆಹೋವನು ಹೀಗೆನ್ನುತ್ತಾನೆ, “ಈಗ ನಾನು ಎದ್ದುನಿಂತು ನನ್ನ ಮಹತ್ವವನ್ನು ತೋರಿಸುವೆನು. ಈಗ ನಾನು ಜನರಿಗೆ ಉನ್ನತೋನ್ನತನಾಗುವೆನು.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಇಡೀಲೋಕದ ನ್ಯಾಯಾಧಿಪತಿ ನೀನೇ. ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು.


ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯಮಾಡುವೆ; ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.


ದೇವರು ಕರುಣೆಯನ್ನು ಮರೆತುಬಿಟ್ಟಿರುವನೇ? ಆತನ ಕನಿಕರವು ಬದಲಾವಣೆ ಹೊಂದಿ ಕೋಪವಾಗಿರುವುದೇ?”


ಯೆಹೋವನೇ, ನನ್ನನ್ನು ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?


ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. ಅವರು ಬಲಿಷ್ಠರಾಗಕೂಡದು.


ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು!


ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.


ಆಗ ಸಂಸೋನನು ಯೆಹೋವನಿಗೆ, “ಸರ್ವಶಕ್ತನಾದ ಯೆಹೋವನೇ, ನನ್ನ ಕಡೆಗೆ ಗಮನ ಹರಿಸು. ದೇವರೇ, ದಯವಿಟ್ಟು ನನಗಿನ್ನೊಂದು ಸಲ ಶಕ್ತಿಯನ್ನು ಕೊಡು. ಫಿಲಿಷ್ಟಿಯರು ನನ್ನ ಎರಡು ಕಣ್ಣುಗಳನ್ನು ಕಿತ್ತುಹಾಕಿದ್ದಕ್ಕೆ ಇದೊಂದು ಸಲ ಅವರನ್ನು ಶಿಕ್ಷಿಸುತ್ತೇನೆ” ಎಂದು ಬೇಡಿಕೊಂಡನು.


“ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.”


ಯೆಹೋವನೇ, ಎದ್ದೇಳು, ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.


ದೇವರೇ, ನಿನ್ನ ಪಾರಿವಾಳವನ್ನು ಆ ದುಷ್ಟ ಪ್ರಾಣಿಗಳು ತೆಗೆದುಕೊಳ್ಳದಿರಲಿ. ನಿನ್ನ ಬಡಜನರನ್ನು ಮರೆತುಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು