Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:17 - ಪರಿಶುದ್ದ ಬೈಬಲ್‌

17 ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ. ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದೀ; ಅವರ ಹೃದಯವನ್ನು ಧೈರ್ಯಪಡಿಸುತ್ತೀ; ಅವರ ಮೊರೆಗೆ ಕಿವಿಗೊಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:17
28 ತಿಳಿವುಗಳ ಹೋಲಿಕೆ  

ಆತನು ತನ್ನ ಭಕ್ತರ ಇಷ್ಟವನ್ನು ನೆರವೇರಿಸುವನು. ಆತನು ಅವರ ಮೊರೆಗೆ ಕಿವಿಗೊಟ್ಟು ಅವರನ್ನು ರಕ್ಷಿಸುವನು.


ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು.


ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.


ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.”


ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ಯೆಹೋವನಿಗೆ ಸಂತೋಷದಿಂದ ಸೇವೆಮಾಡು. ನಿನಗೆ ಬೇಕಾದುದನ್ನು ಆತನೇ ಕೊಡುವನು.


ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು.


ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಪ್ರಭುವಿನ ಎದುರಿನಲ್ಲಿ ದೀನರಾಗಿರಿ, ಆತನು ನಿಮ್ಮನ್ನು ಉನ್ನತ ಮಟ್ಟಕ್ಕೆ ತರುತ್ತಾನೆ.


ಜನರು ತಾವು ಹೇಳಬೇಕಾದದ್ದನ್ನು ಆಲೋಚಿಸಿಕೊಂಡರೂ ನಾಲಿಗೆಗೆ ತಕ್ಕ ಮಾತುಗಳನ್ನು ಕೊಡುವವನು ಯೆಹೋವನೇ.


ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ನಾವು ಕ್ರಿಸ್ತನಲ್ಲಿರುವ ನಂಬಿಕೆಯ ಮೂಲಕ ದೇವರ ಬಳಿಗೆ ಸ್ವತಂತ್ರದಿಂದ ಮತ್ತು ನಿರ್ಭಯದಿಂದ ಹೋಗಲು ಸಾಧ್ಯವಾಯಿತು.


ಹೌದು, ಕ್ರಿಸ್ತನ ಮೂಲಕ ನಾವೆಲ್ಲರೂ ಒಬ್ಬ ಆತ್ಮನಿಂದ ನಮ್ಮ ತಂದೆಯಾದ ದೇವರ ಬಳಿಗೆ ಬರಲು ಶಕ್ತರಾಗಿದ್ದೇವೆ.


ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.


“ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು. ಪರಲೋಕರಾಜ್ಯ ಅವರದು.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಕೆಡುಕನಿಗೆ ಅವನು ಭಯಪಡುವುದೇ ಸಂಭವಿಸುವುದು. ಒಳ್ಳೆಯವನಾದರೋ ತನಗೆ ಬೇಕಾದದ್ದನ್ನೆಲ್ಲ ಪಡೆದುಕೊಳ್ಳುವನು.


ಕೆಲವೊಮ್ಮೆ, ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ; ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ ದೇವರು ಅವರನ್ನು ಮರೆತುಬಿಡುವುದಿಲ್ಲ.


ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು