Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:4 - ಪರಿಶುದ್ದ ಬೈಬಲ್‌

4 ಆ ದುಷ್ಟರು ಗರ್ವದಿಂದ ದೇವರನ್ನು ತೊರೆದುಬಿಡುವರು; ದುಷ್ಟಾಲೋಚನೆಗಳನ್ನು ಮಾಡುತ್ತಾ ದೇವರಿಲ್ಲದಂತೆ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ : “ದೇವರೇ ಇಲ್ಲ"! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ವಿಚಾರಿಸುವದಿಲ್ಲ ಎಂದು ದುಷ್ಟನು ಸೊಕ್ಕಿನ ಮುಖದಿಂದ ಹೇಳಿಕೊಂಡು ದೇವರಿಲ್ಲವೆಂಬದಾಗಿ ಸದಾ ಯೋಚಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:4
30 ತಿಳಿವುಗಳ ಹೋಲಿಕೆ  

ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.


ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.


ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.


“ನನಗೆ ವಿರುದ್ಧವಾಗಿ ಎದ್ದವರನ್ನು ಸ್ವೀಕರಿಸಲು ನಾನು ದಿನವೆಲ್ಲಾ ಸಿದ್ಧನಾಗಿ ನಿಂತೆನು. ಅವರು ನನ್ನ ಬಳಿಗೆ ಬರುತ್ತಾರೆಂದು ಕಾಯುತ್ತಾ ನಿಂತುಕೊಂಡೆನು. ಆದರೆ ಅವರು ಕೆಟ್ಟಜೀವಿತದಲ್ಲಿಯೇ ಮುಂದುವರಿದರು. ಅವರು ತಮಗೆ ಇಷ್ಟಬಂದ ಹಾಗೆ ನಡೆದರು.


ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ.


ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು; ಸರ್ವಶಕ್ತನಾದ ದೇವರು ನಮಗೇನೂ ಮಾಡಲಾರನು!’ ಎಂದು ಹೇಳಿದ್ದರು.


ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.


ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.


ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.


ಒಬ್ಬ ವ್ಯಕ್ತಿಯ ಅಂತರಂಗದಲ್ಲಿ ಈ ಕೆಟ್ಟ ಆಲೋಚನೆಗಳೆಲ್ಲವೂ ಆರಂಭವಾಗುತ್ತವೆ: ದುರಾಲೋಚನೆ, ಲೈಂಗಿಕಪಾಪ, ಕಳ್ಳತನ, ಕೊಲೆ,


ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?


ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಕೃತ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ.


ಜನರ ಮುಖಭಾವವೇ ಅವರ ದುಷ್ಕೃತ್ಯಗಳನ್ನು ಎತ್ತಿತೋರಿಸುವವು. ಅವರು ತಮ್ಮ ಪಾಪಗಳಿಗಾಗಿ ಹೆಚ್ಚಳಪಡುವರು. ಅವರು ಸೊದೋಮಿನ ಜನರಂತಿದ್ದಾರೆ. ತಮ್ಮ ಪಾಪಗಳನ್ನು ಯಾರು ನೋಡಿದರೂ ಅವರಿಗೆ ಚಿಂತೆಯಿಲ್ಲ. ಇದು ನಿಜವಾಗಿಯೂ ಭಯಂಕರವಾದದ್ದು. ಅವರು ತಮಗೆ ಬಹಳ ಸಂಕಟಗಳನ್ನು ಬರಮಾಡಿಕೊಂಡಿದ್ದಾರೆ.


ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ.


ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.


ಗರ್ವದ ಕಣ್ಣುಗಳು ಮತ್ತು ದುರಾಭಿಮಾನದ ಹೃದಯ ಪಾಪಮಯವಾಗಿದ್ದು ದುಷ್ಟನಿಗೆ ಮಾರ್ಗದರ್ಶನ ನೀಡುತ್ತವೆ.


ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.


ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ.


ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.


ಯೆಹೋವನೇ, ನಾನು ನಿನ್ನೊಂದಿಗೆ ಹೃದಯಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ. ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ.


ಯೆಹೋವನೇ, ನೀನು ದೀನರಿಗೆ ಸಹಾಯಮಾಡುವೆ. ಗರ್ವಿಷ್ಠರಿಗಾದರೋ ಅವಮಾನ ಮಾಡುವೆ.


“ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!” ಎಂದು ಆ ದುಷ್ಟರು ಹೇಳಿಕೊಳ್ಳುವರು.


ಜನರ ಅಪರಾಧಗಳಿಗೆ ದಂಡನೆಯು ಕೂಡಲೇ ಬರದಿರುವುದರಿಂದ ದುಷ್ಕೃತ್ಯಗಳನ್ನು ಮಾಡಲು ಇತರರು ಸಹ ಪ್ರೇರಿತರಾಗುತ್ತಾರೆ.


“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು