Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:9 - ಪರಿಶುದ್ದ ಬೈಬಲ್‌

9 ಅವರು ಬೇಟೆಯಾಡುವ ಸಿಂಹಗಳಂತಿದ್ದಾರೆ. ಅವರು ನಿಸ್ಸಹಾಯಕರ ಮೇಲೆ ಆಕ್ರಮಣ ಮಾಡಿ ತಮ್ಮ ಬಲೆಗಳಲ್ಲಿ ಎಳೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು, ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೊಂಚುಹಾಕುವನವನು ಗುಹೆಯೊಳಗಿನ ಸಿಂಹದಂತೆ I ಕಾಯ್ದು ಹಿಡಿದೆಳೆವನು ದಲಿತರನು ಬಲೆಗೆ ಬೀಳ್ವಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಿಂಹದ ಹಾಗೆ, ಮರೆಯಲ್ಲಿ ಹೊಂಚುಹಾಕುತ್ತಾನೆ; ಅಸಹಾಯಕರನ್ನು ಹಿಡಿಯಲು ಕಾಯುತ್ತಾನೆ ಕುಗ್ಗಿದವನನ್ನು ಹಿಡಿದೆಳೆದು ತನ್ನ ಬಲೆಯಲ್ಲಿ ಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:9
28 ತಿಳಿವುಗಳ ಹೋಲಿಕೆ  

ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ.


ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ.


ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.


ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, “ನಿನಗೆ ಸಮಾನರು ಇಲ್ಲವೇ ಇಲ್ಲ. ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ.”


ಕುರಿಗಳನ್ನು ನೋಡಿಕೊಳ್ಳುವುದಕ್ಕಾಗಿ ನೇಮಿತನಾಗಿರುವ ಕೂಲಿಯಾಳು ಕುರುಬನಿಗಿಂತ ಭಿನ್ನವಾಗಿದ್ದಾನೆ. ಕೂಲಿಯಾಳು ಕುರಿಗಳ ಒಡೆಯನಲ್ಲ. ಆದ್ದರಿಂದ ಕೂಲಿಯಾಳು ತೋಳ ಬರುವುದನ್ನು ಕಾಣುವಾಗ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳ ಮೇಲೆ ಬಿದ್ದು ಅವುಗಳನ್ನು ಚದರಿಸಿಬಿಡುತ್ತದೆ.


ರೋದಿಸುವ ಕುರುಬರ ಕಡೆಗೆ ಕಿವಿಗೊಡಿರಿ. ಅವರ ನಾಯಕರುಗಳನ್ನು ತೆಗೆದುಕೊಂಡು ಹೋಗಿರುತ್ತಾರೆ. ಪ್ರಾಯದ ಸಿಂಹಗಳ ಗರ್ಜನೆಗೆ ಕಿವಿಗೊಡಿರಿ. ಯೋರ್ದನ್ ಹೊಳೆಯ ಬದಿಯಲ್ಲಿದ್ದ ದಟ್ಟವಾದ ಪೊದರುಗಳೆಲ್ಲಾ ತೆಗೆದುಕೊಂಡು ಹೋಗಲಾಗಿದೆ.


ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನೂ ಸುಲಭವಾಗಿ ಗೆಲ್ಲುವೆವೆಂದು ಅವರು ನೆನೆಸಿದ್ದರು.


ಅಡವಿಯಲ್ಲಿರುವ ಸಿಂಹವು ಪ್ರಾಣಿಯನ್ನು ಹಿಡಿದ ನಂತರವೇ ಗರ್ಜಿಸುವದು. ಪ್ರಾಯದ ಸಿಂಹವು ತನ್ನ ಗವಿಯಲ್ಲಿ ಗರ್ಜಿಸಿದರೆ ಅದು ಒಂದು ಪ್ರಾಣಿಯನ್ನು ಹಿಡಿಯಿತು ಎಂದು ಅರ್ಥ.


“ಸಾಮಾನ್ಯ ಜನರು ಮೋಸ ಮಾಡುತ್ತಾರೆ ಮತ್ತು ದರೋಡೆ ಮಾಡುತ್ತಾರೆ. ತಾವು ಧನಿಕರಾಗುವದಕ್ಕೆ ನಿಸ್ಸಹಾಯಕರಾದ ಭಿಕ್ಷೆಗಾರರನ್ನು ಸುಲುಕೊಳ್ಳುವರು. ಅವರು ಪರದೇಶಿಗಳಿಗೆ ಮೋಸಮಾಡಿ ಅವರಿಗೆ ಅನ್ಯಾಯ ಮಾಡುವರು.


ನನ್ನ ಪಾಲಿಗಂತೂ ಯೆಹೋವನು ಆಕ್ರಮಣಮಾಡಲು ಸಿದ್ಧವಾಗಿರುವ ಕರಡಿಯಂತೆಯೂ ಅಡಗಿಕೊಂಡಿರುವ ಸಿಂಹದಂತೆಯೂ ಇದ್ದಾನೆ.


ದುಷ್ಟನು ದುಷ್ಟತನವನ್ನು ಉಪಕರಣವನ್ನಾಗಿ ಬಳಸಿಕೊಳ್ಳುವನು. ಬಡಜನರಿಂದ ಪ್ರತಿಯೊಂದನ್ನು ತೆಗೆದುಕೊಳ್ಳಲು ಅವನು ಆಲೋಚಿಸುವನು, ಸುಳ್ಳುಗಳನ್ನು ಹೇಳುವನು. ಅವನ ಸುಳ್ಳುಗಳು ಬಡವನಿಗೆ ನ್ಯಾಯದೊರಕದಂತೆ ಮಾಡುತ್ತವೆ.


ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.


ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು.


ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.


ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”


ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.


ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು.


ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಬಲೆಯನ್ನು ಮಾಡುವ ಬಲೆಗಾರರಂತಿದ್ದಾರೆ. ಅವರು ಬಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನ್ನೇ.


ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ.


ಯಾಕೆಂದರೆ, ಆತನು ಅಸಹಾಯಕರ ಬಲಗಡೆಯಲ್ಲಿ ನಿಂತುಕೊಳ್ಳುವನು; ಮರಣದಂಡನೆ ವಿಧಿಸಬೇಕೆಂದಿರುವ ಜನರಿಂದ ಅವರನ್ನು ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು