Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 101:8 - ಪರಿಶುದ್ದ ಬೈಬಲ್‌

8 ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ. ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ ಪ್ರತಿದಿನವೂ ಬೆಳಗಿನಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದುಷ್ಟತನ ಮಾಡುವವರೆಲ್ಲರನ್ನು ಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು; ಯೆಹೋವ ದೇವರ ಪಟ್ಟಣದೊಳಗಿಂದ ಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 101:8
16 ತಿಳಿವುಗಳ ಹೋಲಿಕೆ  

ದುಷ್ಟರಿಂದ ಅಧಿಕಾರವನ್ನು ಕಿತ್ತುಕೊಂಡು ಒಳ್ಳೆಯವರಿಗೆ ಅದನ್ನು ಒಪ್ಪಿಸಿಕೊಡುವೆನು.


ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಧಿಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಬೇಕು. ನೀವು ಹಾಗೆ ಮಾಡದಿದ್ದರೆ ನನಗೆ ಬಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’


ರಾಜನು ಕೆಟ್ಟದ್ದನ್ನು ಸಹಿಸಲಾರನು; ಯಾಕೆಂದರೆ ಒಳ್ಳೆಯದರಿಂದಲೇ ಅವನ ರಾಜ್ಯಕ್ಕೆ ಬಲ.


ರಾಜನು ನ್ಯಾಯತೀರ್ಪು ಮಾಡುವಾಗ ತನ್ನ ಕಣ್ಣುಗಳಿಂದ ದುಷ್ಟತನವನ್ನು ಶೋಧಿಸುವನು.


ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ. ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು.


ಯಾಕೋಬಿನ ನಾಯಕರೇ, ಇಸ್ರೇಲಿನ ಪ್ರಧಾನರೇ, ನನಗೆ ಕಿವಿಗೊಡಿರಿ! ಸರಿಯಾದ ಜೀವಿತವನ್ನು ನೀವು ದ್ವೇಷಿಸುತ್ತೀರಿ. ನೆಟ್ಟಗಿರುವದನ್ನು ಡೊಂಕಾಗಿ ನೀವು ಮಾಡುವಿರಿ.


ಯೆಹೋವನ ದೇಶದಲ್ಲಿ ಇಸ್ರೇಲು ವಾಸಿಸದು. ಎಫ್ರಾಯೀಮ್ ಈಜಿಪ್ಟಿಗೆ ಹಿಂದಿರುಗುವದು. ಅಶ್ಶೂರ್ಯದಲ್ಲಿ ಅವರು ತಮಗೆ ನಿಷೇಧಿಸಲ್ಪಟ್ಟ ಆಹಾರವನ್ನು ತಿನ್ನುವರು.


ಜ್ಞಾನಿಯಾದ ರಾಜನಿಗೆ ಕೆಡುಕರು ಯಾರೆಂಬುದು ಗೊತ್ತಾಗುವುದು; ಅವನು ಅವರನ್ನು ದಂಡಿಸುವನು.


ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು. ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ.


ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ನನ್ನನ್ನಾದರೋ ನೀನು ಕಾಡುಕೋಣ ಬಲಿಷ್ಠನನ್ನಾಗಿ ಮಾಡಿರುವೆ. ನಿನ್ನ ಚೈತನ್ಯ ತೈಲವನ್ನು ನನ್ನ ಮೇಲೆ ಸುರಿದಾತನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು