Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:14 - ಪರಿಶುದ್ದ ಬೈಬಲ್‌

14 ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೊಳೆಸುವೆ ಹುಲ್ಲನ್ನು ದನಕರುಗಳಿಗೋಸ್ಕರ I ಬೆಳೆಸುವೆ ಪೈರನು ನರಮಾನವರಿಗೋಸ್ಕರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಪಶುಗಳಿಗೋಸ್ಕರ ಹುಲ್ಲನ್ನೂ, ಮನುಷ್ಯನ ವ್ಯವಸಾಯಕ್ಕೋಸ್ಕರ ಪಲ್ಯಗಳನ್ನೂ ಮೊಳೆಸುತ್ತಾರೆ. ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:14
18 ತಿಳಿವುಗಳ ಹೋಲಿಕೆ  

ಆತನು ಪ್ರತಿಯೊಬ್ಬರಿಗೂ ಆಹಾರವನ್ನು ಕೊಡುವನು. ಆತನ ಪ್ರೀತಿ ಶಾಶ್ವತವಾದದ್ದು.


ಭೂಮಿಯ ಮೇಲ್ಭಾಗದಿಂದ ಆಹಾರವು ಬೆಳೆಯುತ್ತದೆ. ಭೂಮಿಯ ಕೆಳಭಾಗವಾದರೋ ಬೆಂಕಿಯಿಂದ ಕರಗಿಹೋದಂತಿರುವುದು.


ಆದ್ದರಿಂದ ಬೀಜ ಬಿತ್ತುವವನಾಗಲಿ ನೀರು ಹಾಕುವವನಾಗಲಿ ಮುಖ್ಯನಲ್ಲ. ದೇವರೊಬ್ಬನು ಮಾತ್ರ ಮುಖ್ಯವಾದವನು, ಏಕೆಂದರೆ ಬೀಜಗಳನ್ನು ಬೆಳೆಯಿಸುವವನು ಆತನೊಬ್ಬನೇ.


ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ.


ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.


ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. ಮರುಭೂಮಿಯು ಹುಲ್ಲುಗಾವಲಾಗುವದು. ಮರಗಳು ಹಣ್ಣುಗಳನ್ನು ಬಿಡುವವು. ಅಂಜೂರದ ಮರಗಳೂ ದ್ರಾಕ್ಷಿಬಳ್ಳಿಗಳೂ ಬಹಳ ಹಣ್ಣುಗಳನ್ನು ಬಿಡುವವು.


ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು.


ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.


ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.


ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡಲು ಯಾರೂ ಇರಲಿಲ್ಲ.


ನಿಮ್ಮ ಹೊಲಗಳಲ್ಲಿ ಮತ್ತು ನಿಮ್ಮ ಪಶುಗಳಿಗೆ ಹುಲ್ಲು ಹುಲುಸಾಗಿ ಬೆಳೆಯುವಂತೆ ಮಾಡುವೆನು. ನಿಮಗೆ ಆಹಾರವು ಸಮೃದ್ಧಿಕರವಾಗಿರುವುದು.’


ಹುಲ್ಲನ್ನು ಕತ್ತರಿಸಿದ ಮೇಲೆ ಹೊಸಹುಲ್ಲು ಬೆಳೆಯಲಾರಂಭಿಸುವುದು; ಒಣಹುಲ್ಲನ್ನು ಬೆಟ್ಟಗಳ ಮೇಲೆ ಸಂಗ್ರಹಿಸಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು