Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:16 - ಪರಿಶುದ್ದ ಬೈಬಲ್‌

16 ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅನಂತರ ಆತನು ದೇಶದಲ್ಲಿ ಕ್ಷಾಮವನ್ನು ಬರಮಾಡಿ ಆಹಾರವೆಂಬ ಊರುಗೋಲನ್ನು ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:16
17 ತಿಳಿವುಗಳ ಹೋಲಿಕೆ  

ಬಳಿಕ ದೇವರು ನನಗೆ, “ನರಪುತ್ರನೇ, ನಾನು ಜೆರುಸಲೇಮಿಗೆ ರೊಟ್ಟಿಯ ಸರಬರಾಜನ್ನು ನಿಲ್ಲಿಸುವೆನು. ಜನರಿಗೆ ತಿನ್ನಲು ಕೊಂಚ ರೊಟ್ಟಿ ಸಿಗುವುದು. ಆಹಾರವು ಮುಗಿದು ಹೋಗುತ್ತಿರುವದರಿಂದ ಅವರು ಬಹಳವಾಗಿ ಚಿಂತಿಸುವರು. ಅವರಿಗೆ ಸ್ವಲ್ಪವೇ ಕುಡಿಯುವ ನೀರು ಇರುವುದು. ಆ ನೀರನ್ನು ಕುಡಿಯುವಾಗ ಅವರಿಗೆ ಭಯಹಿಡಿಯುವುದು.


ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವನು.


ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.


ನಿಮಗೆ ರೊಟ್ಟಿ ದಯಪಾಲಿಸುವುದನ್ನು ನಾನು ನಿಲ್ಲಿಸಿದಾಗ, ಹತ್ತು ಮಂದಿ ಸ್ತ್ರೀಯರು ತಮ್ಮಲ್ಲಿರುವ ಎಲ್ಲಾ ರೊಟ್ಟಿಗಳನ್ನು ಒಂದೇ ಒಲೆಯಲ್ಲಿ ಸುಡುವರು. ಅವರು ಪ್ರತಿ ರೊಟ್ಟಿಯ ತುಂಡನ್ನು ತೂಕ ಮಾಡಿ ಹಂಚಿಕೊಳ್ಳುವರು. ನೀವು ತಿಂದರೂ ಹಸಿದವರಾಗಿಯೇ ಇರುವಿರಿ.


ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು.


ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.


ಎಲೀಷನು ತಾನು ಮರಳಿ ಜೀವಿಸುವಂತೆ ಮಾಡಿದ ಬಾಲಕನ ತಾಯಿಯೊಂದಿಗೆ ಮಾತನಾಡಿದನು. ಎಲೀಷನು, “ನೀನು ಮತ್ತು ನಿನ್ನ ಕುಟುಂಬವು ಬೇರೆ ದೇಶಕ್ಕೆ ಹೋಗಬೇಕು. ಏಕೆಂದರೆ ಈ ದೇಶದಲ್ಲಿ ಬರಗಾಲವು ಏಳು ವರ್ಷಗಳವರೆಗೆ ಇರಬೇಕೆಂದು ಯೆಹೋವನು ತೀರ್ಮಾನಿಸಿದ್ದಾನೆ” ಎಂದು ಹೇಳಿದನು.


ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಬರಗಾಲದಿಂದ ಬಡದೇಶಗಳಾದವು.


ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.


ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ನಿನ್ನ ಕಣ್ಣೆದುರಿನಲ್ಲಿಯೇ ನಾವು ಖಂಡಿತವಾಗಿ ಸಾಯುತ್ತೇವೆ. ಆದರೆ ನೀನು ನಮಗೆ ಆಹಾರವನ್ನು ಕೊಟ್ಟರೆ, ನಾವು ಫರೋಹನಿಗೆ ನಮ್ಮ ಭೂಮಿಯನ್ನು ಕೊಟ್ಟು ಅವನ ಗುಲಾಮರಾಗಿರುತ್ತೇವೆ. ಬಿತ್ತನೆ ಮಾಡಲು ನಮಗೆ ಬೀಜವನ್ನು ಕೊಡು. ಆಗ ನಾವು ಬದುಕುತ್ತೇವೆ, ಸಾಯುವುದಿಲ್ಲ. ಮತ್ತು ಭೂಮಿಯೂ ಬೆಳೆಗಳನ್ನು ಫಲಿಸುತ್ತದೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು