Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:23 - ಪರಿಶುದ್ದ ಬೈಬಲ್‌

23 ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:23
19 ತಿಳಿವುಗಳ ಹೋಲಿಕೆ  

“ನಾನು ಯೆಹೋವನ ಮುಂದೆ ನಲವತ್ತು ದಿನ ಹಗಲಿರುಳು ಬೋರಲಬಿದ್ದು ಆತನು ನಾಶಮಾಡಬೇಕೆಂದಿದ್ದ ನಿಮಗಾಗಿ ಪ್ರಾರ್ಥಿಸಿದೆನು.


ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.


“ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.


“ಇಗೋ, ನನ್ನ ಸೇವಕನು. ನಾನು ಆತನನ್ನು ಆರಿಸಿಕೊಂಡಿದ್ದೇನೆ. ಆತನನ್ನು ಪ್ರೀತಿಸುತ್ತೇನೆ, ಆತನನ್ನು ಮೆಚ್ಚಿದ್ದೇನೆ. ಆತನ ಮೇಲೆ ನನ್ನ ಆತ್ಮವನ್ನು ಇರಿಸುವೆನು. ಆತನು ಜನಾಂಗಗಳಿಗೆ ನ್ಯಾಯವಾದ ತೀರ್ಪು ಮಾಡುವನು.


ಆದರೆ ಅವರು ನನ್ನ ವಿರುದ್ಧವಾಗಿ ಎದ್ದು ನನ್ನ ಮಾತುಗಳನ್ನು ಕೇಳದೆ ಹೋದರು. ತಮ್ಮ ವಿಗ್ರಹಗಳನ್ನು ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಆದ್ದರಿಂದ ನಾನು ಅವರನ್ನು (ಇಸ್ರೇಲರನ್ನು) ಈಜಿಪ್ಟಿನಲ್ಲಿಯೇ ನಾಶಮಾಡಿ ನನ್ನ ರೋಷಾಗ್ನಿಯನ್ನು ತೀರಿಸಿಕೊಳ್ಳಲು ಆಲೋಚಿಸಿದೆನು.


ಗೋಡೆಗಳು ಬಿದ್ದುಹೋದ ಸ್ಥಳಗಳನ್ನು ನೀವು (ಪ್ರವಾದಿಗಳು) ಕಾವಲು ಕಾಯುವದಿಲ್ಲ. ಇಸ್ರೇಲ್ ಜನರಿಗೋಸ್ಕರ ನೀವು ಗೋಡೆಗಳನ್ನು ಕಟ್ಟುವುದಿಲ್ಲ. ಆದ್ದರಿಂದ ಯೆಹೋವನಿಂದ ದಂಡನೆಯ ದಿನವು ಬಂದಾಗ ಜನರು ಯುದ್ಧದಲ್ಲಿ ಸೋತು ಹೋಗುವರು.


ನೀವು ಆತನ ಸೇವಕನಾದ ಅಬ್ರಹಾಮನ ಸಂತತಿಯವರಾಗಿದ್ದೀರಿ; ಆತನು ಆರಿಸಿಕೊಂಡ ಯಾಕೋಬನ ಸಂತತಿಯವರಾಗಿದ್ದೀರಿ.


ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ತನ್ನವನೆಂದು ಮತ್ತು ಪವಿತ್ರನೆಂದು ಯೆಹೋವನು ತೋರಿಸುವನು. ತಾನು ಆರಿಸಿಕೊಂಡವನನ್ನು ಯೆಹೋವನು ತನ್ನ ಹತ್ತಿರ ಬರಮಾಡಿಕೊಳ್ಳುವನು.


ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.


ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.


ಆದ್ದರಿಂದ ದೇವರು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಯಾಜಕನಾದ ಆರೋನನನ್ನೂ ಕಳುಹಿಸಿದನು.


ಯೆಹೋವನ ಭಯಂಕರ ಕೋಪಕ್ಕೆ ನಾನು ಹೆದರಿದ್ದೆನು. ನಿಮ್ಮನ್ನು ನಾಶಮಾಡುವಷ್ಟರ ತನಕ ಆತನು ಕೋಪಗೊಂಡಿದ್ದನು. ಆದರೆ ಆತನು ನನ್ನ ಬಿನ್ನಹಗಳನ್ನು ಲಾಲಿಸಿದನು.


ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


“ಹಿಂದಿನ ಪ್ರಕಾರ ಈ ಸಾರಿಯೂ ನಾನು ನಲವತ್ತು ದಿನ ಹಗಲಿರುಳು ಬೆಟ್ಟದ ಮೇಲಿದ್ದೆನು. ನನ್ನ ಮಾತುಗಳನ್ನು ಯೆಹೋವನು ಆಲೈಸಿದನು; ನಿಮ್ಮನ್ನು ನಾಶಮಾಡುವುದಿಲ್ಲವೆಂದು ಪ್ರಮಾಣ ಮಾಡಿದನು.


ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯ ಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು