Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:41 - ಪರಿಶುದ್ದ ಬೈಬಲ್‌

41 ಆತನು ತನ್ನ ಜನರನ್ನು ಅನ್ಯಜನಾಂಗಗಳಿಗೆ ಒಪ್ಪಿಸಿದನು; ಅವರ ಮೇಲೆ ದೊರೆತನ ಮಾಡುವಂತೆ ವೈರಿಗಳಿಗೆ ಅವರನ್ನು ಬಿಟ್ಟುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಎಂತಲೆ ಒಪ್ಪಿಸಿದನವರನು ಅನ್ಯರಾಷ್ಟ್ರಗಳ ಕೈಗೆ I ಹಗೆಮಾಡುತ್ತಿದ್ದವರೇ ಅಧಿಕಾರಿಗಳಾದರವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅವರನ್ನು ಇತರ ಜನಾಂಗಗಳ ಕೈಗೆ ಒಪ್ಪಿಸಿಕೊಟ್ಟರು. ಹೀಗೆ ಅವರ ವೈರಿಗಳು ಅವರನ್ನು ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:41
16 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ಇಸ್ರೇಲರು ಪುನಃ ದುಷ್ಕೃತ್ಯಗಳನ್ನು ಮಾಡುವುದನ್ನು ಯೆಹೋವನು ನೋಡಿದನು. ಆದ್ದರಿಂದ ಆತನು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಇಸ್ರೇಲರನ್ನು ಸೋಲಿಸುವ ಶಕ್ತಿಯನ್ನು ಕೊಟ್ಟನು.


ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಆದ್ದರಿಂದ ಆತನು ನಿಮ್ಮ ವೈರಿಗಳನ್ನು ಕಳುಹಿಸಿ ಅವರ ಸೇವೆ ನೀವು ಮಾಡುವಂತೆ ಮಾಡುವನು. ನೀವು ಹಸಿವು ಬಾಯಾರಿಕೆಗಳಿಂದ ಬಳಲುವಿರಿ; ಬಟ್ಟೆಯಿಲ್ಲದೆ ಬಡವರಾಗಿ ಜೀವಿಸುವಿರಿ. ನಿಮ್ಮ ಯೆಹೋವನು ನಿಮ್ಮ ಮೇಲೆ ಭಾರವನ್ನು ಹೊರಿಸುವನು. ಆ ಭಾರವನ್ನು ನಿಮ್ಮಿಂದ ತೆಗೆಯಲಾಗುವುದಿಲ್ಲ; ನೀವು ನಾಶವಾಗುವಿರಿ.


“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ಮೋವಾಬ್ಯರ ಅರಸನಾದ ಎಗ್ಲೋನನು ಇಸ್ರೇಲರ ಮೇಲೆ ಹದಿನೆಂಟು ವರ್ಷ ಆಳ್ವಿಕೆ ಮಾಡಿದನು.


ಆಗ ಯೆಹೂದಕುಲದ ಮೂರು ಸಾವಿರ ಜನರು ಸಂಸೋನನಲ್ಲಿಗೆ ಹೋದರು. ಅವರು ಏಟಾಮಿನ ಬಂಡೆಯ ಬಳಿಯಲ್ಲಿದ್ದ ಗುಹೆಗೆ ಬಂದು ಅವನಿಗೆ, “ನೀನು ನಮಗೆ ಮಾಡಿರುವುದೇನು? ಫಿಲಿಷ್ಟಿಯರು ನಮ್ಮನ್ನು ಆಳುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೇ?” ಎಂದು ಕೇಳಿದರು. ಸಂಸೋನನು, “ಅವರು ನನಗೆ ಮಾಡಿದ ದ್ರೋಹಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆ” ಎಂದನು.


ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನನ್ನನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.


ಆಗ ನಾನು ನಿನ್ನನ್ನು ಶಿಕ್ಷಿಸಿದೆನು. ನಾನು ನಿನಗೆ ಕೊಟ್ಟ ದೇಶದಿಂದ ಸ್ವಲ್ಪ ಭಾಗವನ್ನು ಕಿತ್ತುಕೊಂಡೆನು. ನಿನ್ನ ಶತ್ರುಗಳಾದ ಫಿಲಿಷ್ಟಿಯರ ಹೆಣ್ಣುಮಕ್ಕಳು ನಿನ್ನೊಂದಿಗೆ ತಮಗೆ ಇಷ್ಟ ಬಂದಂತೆ ವರ್ತಿಸಲುಬಿಟ್ಟೆನು. ನಿನ್ನ ಕೆಟ್ಟಕಾರ್ಯಗಳನ್ನು ನೋಡಿ ಅವರೂ ಅಚ್ಚರಿಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು