Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:5 - ಪರಿಶುದ್ದ ಬೈಬಲ್‌

5 ಯೆಹೋವನೇ, ನಿನ್ನ ಜನರಿಗೋಸ್ಕರ ನೀನು ಮಾಡುವ ಒಳ್ಳೆಯವುಗಳಲ್ಲಿ ನನಗೂ ಪಾಲು ದೊರೆಯಲಿ. ನಿನ್ನ ಜನರೊಂದಿಗೆ ನಾನೂ ಸಂತೋಷಪಡುವಂತೆ ಮಾಡು. ನಿನ್ನ ಜನರೊಂದಿಗೆ ನಾನೂ ನಿನ್ನ ಬಗ್ಗೆ ಹೆಮ್ಮೆಪಡುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ, ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:5
26 ತಿಳಿವುಗಳ ಹೋಲಿಕೆ  

ಆತನು ತನ್ನ ಜನರನ್ನು ಈಜಿಪ್ಟಿನಿಂದ ಹೊರತಂದನು. ಜನರು ಉಲ್ಲಾಸಪಡುತ್ತಾ ಹರ್ಷಗೀತೆಗಳನ್ನು ಹಾಡುತ್ತಾ ಹೊರಬಂದರು!


ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


ಜೆರುಸಲೇಮೇ, ಹಾಡುತ್ತಾ ಸಂತೋಷಿಸುತ್ತಿರು. ಇಸ್ರೇಲೇ, ಸಂತೋಷದಿಂದ ಆರ್ಭಟಿಸು. ಜೆರುಸಲೇಮೇ, ಸಂತೋಷದಿಂದಿದ್ದು ಉಲ್ಲಾಸಿಸು.


ಜೆರುಸಲೇಮೇ, ಹರ್ಷಿಸು. ಜೆರುಸಲೇಮನ್ನು ಪ್ರೀತಿಸುವ ಜನರೇ, ಹರ್ಷಿಸಿರಿ. ಜೆರುಸಲೇಮಿಗೆ ದುಃಖಕೊಡುವ ವಿಷಯಗಳು ಜರುಗಿದ್ದರಿಂದ ನೀವು ದುಃಖಪಡುತ್ತಿದ್ದೀರಿ. ಆದರೆ ನೀವೀಗ ಸಂತೋಷಪಡಬೇಕು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ನೀವು ಆತನ ಸೇವಕನಾದ ಅಬ್ರಹಾಮನ ಸಂತತಿಯವರಾಗಿದ್ದೀರಿ; ಆತನು ಆರಿಸಿಕೊಂಡ ಯಾಕೋಬನ ಸಂತತಿಯವರಾಗಿದ್ದೀರಿ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಸಹೋದರ ಸಹೋದರಿಯರೇ, ಪ್ರಭುವು ನಿಮ್ಮನ್ನು ಪ್ರೀತಿಸುತ್ತಾನೆ. ನಿಮ್ಮನ್ನು ರಕ್ಷಿಸಬೇಕೆಂದು ದೇವರು ನಿಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು. ಆದ್ದರಿಂದ ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತೆ ಸಲ್ಲಿಸಬೇಕು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವ ಪವಿತ್ರಾತ್ಮನಿಂದ ಮತ್ತು ಸತ್ಯದ ಮೇಲೆ ನಿಮಗಿರುವ ನಂಬಿಕೆಯಿಂದ ನೀವು ರಕ್ಷಣೆ ಹೊಂದಿದ್ದೀರಿ.


ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.


ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.


ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


ಜಯೋತ್ಸವವು ನೀತಿವಂತರ ಮನೆಗಳಲ್ಲಿ ಕೇಳಿಬರುತ್ತಿದೆ. ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿಸಿದ್ದಾನೆ.


ನಿನ್ನ ನ್ಯಾಯನಿರ್ಣಯಗಳಿಂದ ಚೀಯೋನ್ ಪರ್ವತವು ಹರ್ಷಿಸಲಿ; ಯೆಹೂದದ ಊರುಗಳು ಉಲ್ಲಾಸಿಸಲಿ.


ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.


ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ಯೆಹೋವನ ಪಾಲು ಆತನ ಜನರೇ. ಇಸ್ರೇಲನ ವಂಶಸ್ಥರು ದೇವಜನರಾಗಿದ್ದಾರೆ.


ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶಮಾಡುವುದು ಸರಿಯೋ?” ಎಂದು ಕೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು