Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:14 - ಪರಿಶುದ್ದ ಬೈಬಲ್‌

14 ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕತ್ತಲು, ಕಗ್ಗತ್ತಲಿಂದವರನು ಹೊರತಂದನು I ಅವರ ಬೇಡಿಬಂಧನಗಳನು ಮುರಿದುಹಾಕಿದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ಅವರ ಬಂಧನಗಳನ್ನು ತೆಗೆದುಹಾಕಿ ಕತ್ತಲೆಯಿಂದಲೂ ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕತ್ತಲೆಯೊಳಗಿಂದಲೂ, ಮರಣದ ನೆರಳಿನಿಂದಲೂ ದೇವರು ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:14
27 ತಿಳಿವುಗಳ ಹೋಲಿಕೆ  

ಅವರು ಹಿಂದೆಂದೂ ತಿಳಿಯದ ರೀತಿಯಲ್ಲಿ ನಾನು ಕುರುಡರನ್ನು ನಡೆಸುವೆನು. ಕುರುಡರು ಹೋಗಿರದ ಸ್ಥಳಕ್ಕೆ ನಾನು ಅವರನ್ನು ನಡಿಸುವೆನು. ನಾನು ಅವರಿಗಾಗಿ ಕತ್ತಲೆಯನ್ನು ಬೆಳಕಾಗಿ ಮಾರ್ಪಡಿಸುವೆನು. ನಾನು ಕೊರಕಲು ನೆಲವನ್ನು ಸಮತಟ್ಟಾಗಿ ಮಾಡುವೆನು. ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು. ನನ್ನ ಜನರನ್ನು ನಾನು ಎಂದಿಗೂ ತೊರೆಯುವದಿಲ್ಲ.


ಯೆಹೋವನೇ, ನಾನು ನಿನ್ನ ಸೇವಕ. ನಿನ್ನ ದಾಸಿಯರಲ್ಲೊಬ್ಬಳ ಮಗ. ನೀನೇ ನನ್ನ ಪ್ರಥಮ ಉಪಾಧ್ಯಾಯ!


ಹಿಂದಿನ ಕಾಲದಲ್ಲಿ ನೀವು ಕಗ್ಗತ್ತಲೆಯಾಗಿದ್ದಿರಿ. ಈಗಲಾದರೋ ನೀವು ಕರ್ತನಲ್ಲಿ ಪೂರ್ಣಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿಗೆ ಸೇರಿದ ಮಕ್ಕಳಂತೆ ಜೀವಿಸಿರಿ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


ಬಳಿಕ ಬೇರೊಬ್ಬನು ಬಂದು ಅವರಿಗೆ, “ಕೇಳಿ! ನೀವು ಸೆರೆಮನೆಯಲ್ಲಿ ಹಾಕಿದ್ದ ಜನರು ದೇವಾಲಯದಲ್ಲಿ ನಿಂತಿದ್ದಾರೆ. ಅವರು ಜನರಿಗೆ ಉಪದೇಶ ಮಾಡುತ್ತಿದ್ದಾರೆ!” ಎಂದು ಹೇಳಿದನು.


ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ,


ನಾನು ವಾಸಿಮಾಡಿದ ಈ ಸ್ತ್ರೀಯಾದರೋ ಯೆಹೂದ್ಯಳು. ಸೈತಾನನು ಆಕೆಯನ್ನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು. ಆದ್ದರಿಂದ ಆಕೆಯನ್ನು ಸಬ್ಬತ್‌ದಿನದಂದು ಕಾಯಿಲೆಯಿಂದ ಬಿಡುಗಡೆ ಮಾಡುವುದು ಖಂಡಿತವಾಗಿಯೂ ತಪ್ಪಲ್ಲ!” ಎಂದು ಹೇಳಿದನು.


ಆತನು ಸೆರೆಯಾಳುಗಳ ಪ್ರಾರ್ಥನೆಗಳನ್ನು ಕೇಳುತ್ತಾನೆ. ಮರಣದಂಡನೆಗೆ ಒಳಗಾದವರನ್ನು ಆತನು ಬಿಡಿಸುತ್ತಾನೆ.


ದೇವರು ಒಬ್ಬಂಟಿಗರಿಗೆ ಸಂಸಾರವನ್ನು ದಯಪಾಲಿಸುವನು. ಆತನು ತನ್ನ ಜನರನ್ನು ಸೆರೆಯಿಂದ ಬಿಡಿಸಿ ಸಂತೋಷಗೊಳಿಸುವನು. ದೇವದ್ರೋಹಿಗಳಾದರೋ ಉರಿಬಿಸಿಲಿನ ಸೆರೆಯಲ್ಲಿ ಉಳಿಯುವರು.


ಅವರು ಒಂದುವೇಳೆ ದಂಡನೆಗೆ ಒಳಗಾಗಿ ಸರಪಣಿಗಳಿಂದ ಬಂಧಿಸಲ್ಪಟ್ಟು ಸಂಕಟಪಡುತ್ತಿದ್ದರೆ,


ಸೆರೆಮನೆಯಲ್ಲಿರುವವರಿಗೆ ನೀವು, ‘ಸೆರೆಮನೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಅಂಧಕಾರದಲ್ಲಿರುವವರಿಗೆ, ‘ಕತ್ತಲೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಪ್ರಯಾಣದಲ್ಲಿರುವವರು ತಿನ್ನುತ್ತಾ ಹೋಗುವರು. ಬೋಳುಬೆಟ್ಟಗಳಲ್ಲೂ ನಿಮಗೆ ಆಹಾರ ದೊರೆಯುವದು.


ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.


ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದುಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ.


ದೇವರು ನನ್ನ ಮಾರ್ಗವನ್ನು ಮುಚ್ಚಿಬಿಟ್ಟಿದ್ದಾನೆ; ಆದ್ದರಿಂದ ನಾನು ಮುಂದೆ ಹೋಗಲಾರೆ. ಆತನು ನನ್ನ ಮಾರ್ಗವನ್ನು ಕತ್ತಲೆಯಲ್ಲಿ ಮರೆಮಾಡಿದ್ದಾನೆ.


ದುಷ್ಟನು ಕತ್ತಲೆಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಬೆಂಕಿಯಿಂದ ಸುಟ್ಟುಹೋದ ಕೊಂಬೆಗಳನ್ನು ಹೊಂದಿರುವ ಮರದಂತೆ ಅವನಿರುವನು. ದೇವರ ಉಸಿರು ದುಷ್ಟನನ್ನು ಬಡಿದುಕೊಂಡು ಹೋಗುವುದು.


ದುಷ್ಟನಿಗೆ ಕತ್ತಲೆಯಿಂದ ಪಾರಾಗುತ್ತೇನೆ ಎಂಬ ನಿರೀಕ್ಷೆಯೇ ಇಲ್ಲ. ಅವನನ್ನು ಕೊಲ್ಲಲು ಕತ್ತಿಯು ಎಲ್ಲೋ ಕಾದುಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು