Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:33 - ಪರಿಶುದ್ದ ಬೈಬಲ್‌

33 ಆತನು ನದಿಗಳನ್ನು ಮರಳುಗಾಡನ್ನಾಗಿ ಮಾರ್ಪಡಿಸಿದನು; ಹರಿಯುವ ಒರತೆಗಳನ್ನು ತಡೆದು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನೀಚ ನಿವಾಸಿಗಳ ಕಾರಣದಿಂದ I ನದಿಗಳನೂ ಮರುಭೂಮಿಯಾಗಿಸಿದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ದೇವರು ನದಿಗಳನ್ನು ಮರುಭೂಮಿಯಾಗಿ ಮಾರ್ಪಡಿಸಿದರು, ನೀರಿನ ಬುಗ್ಗೆಗಳನ್ನು ದಾಹಗೊಂಡ ಭೂಮಿಯಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:33
16 ತಿಳಿವುಗಳ ಹೋಲಿಕೆ  

ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.


ಬೆಟ್ಟಗಳನ್ನೂ ಪರ್ವತಗಳನ್ನೂ ನಾಶಪಡಿಸುವೆನು. ಅಲ್ಲಿ ಬೆಳೆಯುವ ಸಸ್ಯಗಳನ್ನೆಲ್ಲಾ ಒಣಗಿಸಿಬಿಡುವೆನು. ನದಿಗಳನ್ನು ಒಣ ನೆಲವನ್ನಾಗಿ ಮಾರ್ಪಡಿಸುವೆನು; ನೀರಿನ ಹಳ್ಳಗಳನ್ನು ಒಣಗಿಸಿಬಿಡುವೆನು.


ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು.


ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”


ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿಹೋಗುವದು.


ಕಾಡುಪ್ರಾಣಿಗಳೂ ಬಾಯಾರಿ ನಿನ್ನ ಕಡೆಗೆ ನೋಡುತ್ತಿವೆ. ನೀರಿನ ತೊರೆಗಳು ಬತ್ತಿಹೋಗಿವೆ. ನೀರೇ ಇಲ್ಲ. ನಮ್ಮ ಹಸಿರು ಹುಲ್ಲುಗಾವಲು ಬೆಂಕಿಯ ದೆಸೆಯಿಂದ ಮರುಭೂಮಿಯಾಗಿರುತ್ತದೆ.


ನೈಲ್ ನದಿಯನ್ನು ನಾನು ಒಣನೆಲವನ್ನಾಗಿ ಮಾಡುವೆನು. ಆ ಒಣನೆಲವನ್ನು ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನ್ನು ಬಂಜರು ಭೂಮಿಯನ್ನಾಗಿ ಮಾಡಲು ನಾನು ಪರದೇಶಸ್ಥರನ್ನು ಉಪಯೋಗಿಸುವೆನು. ನನ್ನ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”


ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.


ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.


ತೊರೆಗಳೂ ನದಿಗಳೂ ಹರಿಯುವಂತೆ ಮಾಡುವಾತನು ನೀನೇ. ನದಿಗಳನ್ನು ಒಣಗಿಸುವಾತನೂ ನೀನೇ.


ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು