Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:34 - ಪರಿಶುದ್ದ ಬೈಬಲ್‌

34 ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಬುಗ್ಗೆಗಳನ್ನು ಒಣನೆಲವಾಗುವಂತೆಯೂ ಫಲಭೂವಿುಯನ್ನು ಉಪ್ಪುನೆಲವಾಗುವಂತೆಯೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:34
12 ತಿಳಿವುಗಳ ಹೋಲಿಕೆ  

ಈ ರಾಜರುಗಳೆಲ್ಲ ಸಿದ್ದೀಮ್ ಕಣಿವೆಯಲ್ಲಿ ತಮ್ಮ ಸೈನ್ಯಗಳನ್ನು ಒಟ್ಟಿಗೆ ಸೇರಿಸಿದರು. (ಸಿದ್ದೀಮ್ ಕಣಿವೆಯು ಈಗ ಉಪ್ಪುಸಮುದ್ರವಾಗಿದೆ).


ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


ಆದರೆ ಜವುಗು ನೆಲಗಳೂ ಸವುಳು ನೆಲಗಳೂ ಸಿಹಿಯಾಗುವದಿಲ್ಲ. ಅವು ಉಪ್ಪು ತಯಾರಿಸುವದಕ್ಕಾಗಿ ಉಪಯೋಗಿಸಲ್ಪಡುವವು.


ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು.


ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.


ದೇವರೇ, ನಿನ್ನ ಜನರನ್ನು ಈಜಿಪ್ಟಿನಿಂದ ನಡೆಸಿದೆ. ನೀನು ಅರಣ್ಯದಲ್ಲಿ ಅವರ ಮುಂದೆ ಪ್ರಯಾಣ ಮಾಡುತ್ತಿರಲು,


ಯೆಹೂದದ ಜನರೇ, ನೀವು ತಪ್ಪುಗಳನ್ನು ಮಾಡಿರುವಿರಿ. ಆದ್ದರಿಂದಲೇ ಮಳೆಬೆಳೆಗಳು ಆಗಿಲ್ಲ. ನಿಮ್ಮ ಪಾಪಗಳಿಂದಾಗಿ ಯೆಹೋವನ ಆ ಉತ್ತಮ ಕಾಣಿಕೆಗಳನ್ನು ನೀವು ಸವಿಯಲಾಗಲಿಲ್ಲ.


ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.


ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು