Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:43 - ಪರಿಶುದ್ದ ಬೈಬಲ್‌

43 ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಜ್ಞಾನಿಗಳು ಇವುಗಳನ್ನು ಗಮನಿಸಲಿ, ಯೆಹೋವ ದೇವರ ಪ್ರೀತಿಕೃತ್ಯಗಳನ್ನು ಗ್ರಹಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:43
12 ತಿಳಿವುಗಳ ಹೋಲಿಕೆ  

ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


ಈ ಭೂಮಿಯನ್ನು ಏಕೆ ಹಾಳು ಮಾಡಲಾಯಿತು? ಇದನ್ನು ಯಾರೂ ಹೋಗದ ಬರಿದಾದ ಮರಳುಗಾಡನ್ನಾಗಿ ಏಕೆ ಮಾಡಲಾಯಿತು? ಇದನ್ನರಿತ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಬ್ಬನಿದ್ದಾನೆಯೇ? ಯೆಹೋವನ ಸಂದೇಶವನ್ನು ವಿವರಿಸಬಲ್ಲವನೊಬ್ಬನಿದ್ದಾನೆಯೇ?


ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.


ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು.


ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.


ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”


ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.


ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶಮಾಡುವನು.


ತಾನು ಮಾಡತಕ್ಕದ್ದನ್ನು ಕಣ್ಣಾರೆ ಕಂಡರೂ ಅವನು ನನಗೆ ವಿಧೇಯನಾಗುವುದಿಲ್ಲ. ಅವನು ಕಿವಿಯಾರೆ ಕೇಳಿದರೂ ನನ್ನ ಮಾತುಗಳಿಗೆ ವಿಧೇಯನಾಗುವದಿಲ್ಲ; ಅದನ್ನು ಕೇಳಿಸಿಕೊಳ್ಳುವದೂ ಇಲ್ಲ.”


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು