Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:7 - ಪರಿಶುದ್ದ ಬೈಬಲ್‌

7 ದೇವರು ತನ್ನ ಆಲಯದೊಳಗಿಂದ ಹೀಗೆಂದನು: “ನಾನು ಯುದ್ಧದಲ್ಲಿ ಗೆದ್ದು ಜಯಘೋಷ ಮಾಡುವೆನು; ಶೆಕೆಮ್ ಪ್ರದೇಶವನ್ನೂ ಸುಕ್ಕೋತ್ ಬಯಲನ್ನೂ ನನ್ನ ಜನರಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಗರ್ಭಗುಡಿಯಿಂದಲೆ ದೇವನಿಂತೆಂದನು : I “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದುಕೊಡುವೆನು ಸುಖೋತೆಂಬ ಬಯಲನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬೈಲನ್ನು ಅಳೆದುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:7
13 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.


ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನೆಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು.


ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


ಮನಸ್ಸೆ ಕುಲದವರ ಪ್ರದೇಶಗಳು ಆಶೇರ್ ಮತ್ತು ಶೆಕಮಿನ ಹತ್ತಿರವಿದ್ದ ಮಿಕ್ಮೆತಾತಿನ ಮಧ್ಯದಲ್ಲಿ ಬರುತ್ತವೆ. ಅದರ ಸೀಮೆಯು ದಕ್ಷಿಣದಲ್ಲಿ ಎನ್‌ತಪ್ಪೂಹ ಪ್ರದೇಶಕ್ಕೆ ಮುಟ್ಟುತ್ತದೆ.


ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.


ಗಿಲ್ಯಾದ್ ಮತ್ತು ಮನಸ್ಸೆ ನನ್ನವೇ. ಎಫ್ರಾಯೀಮ್ ನನ್ನ ಶಿರಸ್ತ್ರಾಣ. ಯೆಹೂದ ನನ್ನ ರಾಜದಂಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು