Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:20 - ಪರಿಶುದ್ದ ಬೈಬಲ್‌

20 ನನ್ನ ಶತ್ರುವಿಗೂ ನನ್ನನ್ನು ಕೊಲ್ಲಬೇಕೆಂದಿರುವವರಿಗೂ ಯೆಹೋವನು ಅವುಗಳನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನಗೆದುರಾಡಿ ತಪ್ಪು ಹೊರಿಸುವವರಿಗೆ I ಅದುವೇ ಪ್ರಭುವಿನಿಂದ ಗಿಟ್ಟುವ ಕೊಡುಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನನ್ನು ಎದುರಿಸಿ ಕೀಳುಮಾತಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದು ನನಗೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಯೆಹೋವ ದೇವರಿಂದ ಪ್ರತಿಫಲವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:20
19 ತಿಳಿವುಗಳ ಹೋಲಿಕೆ  

ಕಂಚುಗಾರನಾದ ಅಲೆಗ್ಸಾಂಡರನು ನನಗೆ ಅನೇಕ ಕೆಡಕುಗಳನ್ನು ಮಾಡಿದನು. ಅವನು ಮಾಡಿದ ಕೃತ್ಯಗಳಿಗಾಗಿ ಪ್ರಭುವು ಅವನನ್ನು ದಂಡಿಸುವನು.


ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.


ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ ಎಂಬುದು ನಿನಗೆ ತಿಳಿದಿದೆ. ಈಗ ನಿನ್ನ ಆ ಕೆಟ್ಟಕಾರ್ಯಗಳಿಗಾಗಿ ಯೆಹೋವನು ನಿನ್ನನ್ನು ದಂಡಿಸುತ್ತಾನೆ.


ಹೀಗಿರಲಾಗಿ, ನಾನು ನಿಮಗೆ ಹೇಳುವುದೇನೆಂದರೆ, ದೇವರಾತ್ಮನ ಸಹಾಯದಿಂದ ಮಾತಾಡುವ ಯಾವ ವ್ಯಕ್ತಿಯೇ ಆಗಲಿ, “ಯೇಸು ಶಾಪಗ್ರಸ್ತನಾಗಲಿ” ಎಂದು ಹೇಳುವುದಿಲ್ಲ. ಅಂತೆಯೇ ಪವಿತ್ರಾತ್ಮನ ಸಹಾಯವಿಲ್ಲದೆ ಯಾವ ವ್ಯಕ್ತಿಯೇ ಆಗಲಿ, “ಯೇಸುವೇ ಪ್ರಭು” ಎಂದು ಹೇಳಲಾರನು.


ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”


ಯೇಸು ಅವರಿಗೆ, “ಅವನನ್ನು ತಡೆಯಬೇಡಿ. ನನ್ನ ಹೆಸರಿನ ಮೂಲಕ ಅದ್ಭುತಕಾರ್ಯಗಳನ್ನು ಮಾಡುವವನು ಆ ಕೂಡಲೇ ನನ್ನ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳಲು ಸಾಧ್ಯವಿಲ್ಲ.


ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.


ಮನುಷ್ಯಕುಮಾರನು ಬಂದನು. ಆತನು ಬೇರೆ ಜನರಂತೆ ಊಟಮಾಡುತ್ತಾನೆ; ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ಜನರು, ‘ನೋಡಿರಿ! ಅವನು ಹೊಟ್ಟೆಬಾಕ, ಅವನು ಕುಡುಕ, ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಅವನ ಸ್ನೇಹಿತರಾಗಿದ್ದಾರೆ’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕ್ರಿಯೆಗಳಿಂದಲೇ ತನ್ನ ಯೋಗ್ಯತೆಯನ್ನು ತೋರ್ಪಡಿಸುತ್ತದೆ.”


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.


ನನ್ನ ಶತ್ರುಗಳು ಒಟ್ಟುಗೂಡಿ ನನ್ನನ್ನು ಕೊಲ್ಲಲು ಆಲೋಚಿಸಿಕೊಂಡಿದ್ದಾರೆ.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


ರಾಜನು ಅವನಿಗೆ, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಇಥಿಯೋಪ್ಯದವನು, “ನಿನ್ನ ಶತ್ರುಗಳು ಮತ್ತು ನಿನಗೆ ಕೇಡುಮಾಡಲು ನಿನಗೆ ವಿರುದ್ಧವಾಗಿ ಬಂದ ಜನರೆಲ್ಲರು ಈ ಯುವಕನಂತೆಯೇ ದಂಡಿಸಲ್ಪಡುವರು” ಎಂದು ಉತ್ತರಿಸಿದನು.


ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು