Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 11:6 - ಪರಿಶುದ್ದ ಬೈಬಲ್‌

6 ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 11:6
25 ತಿಳಿವುಗಳ ಹೋಲಿಕೆ  

ನಾನು ಗೋಗನನ್ನು ರೋಗಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಬಂದ ಬಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಬೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನ್ನು ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದ್ದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.


ಲೋಟನು ಆ ಪಟ್ಟಣವನ್ನು ಬಿಟ್ಟು ಹೊರಟ ದಿನದಲ್ಲಿಯೂ ಜನರು ಹಾಗೆಯೇ ಮಾಡುತ್ತಿದ್ದರು. ಆಗ ಆಕಾಶದಿಂದ ಬೆಂಕಿಯ ಸುರಿಮಳೆಯಾಗಿ ಅವರೆಲ್ಲರನ್ನೂ ನಾಶಮಾಡಿತು.


ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷ ದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!


ದುಷ್ಟನು ತನ್ನ ಇಷ್ಟಾನುಸಾರ ತಿಂದಮೇಲೆ ದೇವರು ತನ್ನ ದಹಿಸುವ ಕೋಪವನ್ನು ತೋರಿ ಅವನ ಮೇಲೆ ದಂಡನೆಯ ಮಳೆ ಸುರಿಸುವನು.


ಅವನ ಮನೆಯಲ್ಲಿ ಅವನದೇನೂ ಉಳಿದಿರುವುದಿಲ್ಲ. ಉರಿಯುವ ಗಂಧಕವು ಅವನ ಆಸ್ತಿಯಲ್ಲೆಲ್ಲಾ ಹರಡಿಕೊಂಡಿರುತ್ತದೆ.


ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು! ತಂದೆಯು ನನಗೆ ಕೊಟ್ಟಿರುವ ಸಂಕಟದ ಪಾತ್ರೆಯನ್ನು ನಾನು ಸ್ವೀಕರಿಸಿಕೊಳ್ಳಬೇಕು” ಎಂದು ಹೇಳಿದನು.


“ಆದರೆ ಅವನು ಯೆಹೋವನ ಕೋಪವನ್ನು ತಿಳಿದುಕೊಳ್ಳುವನು. ಆ ಕೋಪವು ಯೆಹೋವನ ಬಲಗೈಯಲ್ಲಿರುವ ವಿಷದ ಪಾತ್ರೆಯಂತಿರುವುದು. ಆ ವ್ಯಕ್ತಿಯು ಆ ಕೋಪವನ್ನು ರುಚಿನೋಡುವನು ಮತ್ತು ಅಮಲೇರಿದವನಂತೆ ನೆಲದ ಮೇಲೆ ಕುಸಿದುಬೀಳುವನು. “ದುಷ್ಟ ಅಧಿಪತಿಯೇ, ನೀನು ಆ ಪಾತ್ರೆಯಿಂದ ಕುಡಿಯುವೆ. ನಿನಗೆ ಅವಮಾನವೇ ಹೊರತು, ಮಾನ ಸಿಗುವುದಿಲ್ಲ.


ಆತನು ಮಳೆಯನ್ನು ಕಲ್ಮಳೆಯನ್ನಾಗಿ ಪರಿವರ್ತಿಸಿದನು. ಅವರ ದೇಶದಲ್ಲಿ ಸಿಡಿಲುಗಳು ಹೊಡೆದವು.


ಜೆರುಸಲೇಮೇ, ಎಚ್ಚರಗೊಳ್ಳು; ಎದ್ದೇಳು; ಯೆಹೋವನು ನಿನ್ನ ಮೇಲೆ ಬಹಳವಾಗಿ ಕೋಪಗೊಂಡು ನಿನ್ನನ್ನು ಶಿಕ್ಷಿಸಿದ್ದಾನೆ. ಆ ಶಿಕ್ಷೆಯು ವಿಷತುಂಬಿದ ಪಾತ್ರೆಯಂತಿದೆ. ನೀನು ಅದನ್ನು ಕುಡಿಯಲೇಬೇಕಿತ್ತು. ಈಗ ನೀನು ಅದನ್ನು ಕುಡಿದಿರುವೆ.


ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ. ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ.


ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವುದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ.


ಸಮುವೇಲನು ಅಡಿಗೆಯವನಿಗೆ, “ನಾನು ನಿನಗೆ ಕೊಟ್ಟಿದ್ದ ಮಾಂಸವನ್ನು ತೆಗೆದುಕೊಂಡು ಬಾ; ಪ್ರತ್ಯೇಕವಾಗಿಡಬೇಕೆಂದು ನಾನು ನಿನಗೆ ಹೇಳಿದ್ದ ಭಾಗವೇ ಅದು” ಎಂದು ಹೇಳಿದನು.


ಎಲ್ಕಾನನು ಪ್ರತಿಸಲ ಯಜ್ಞವನ್ನು ಅರ್ಪಿಸುವಾಗ, ಪೆನಿನ್ನಳಿಗೆ ಯಜ್ಞದ ಒಂದು ಭಾಗವನ್ನೂ ಅವಳ ಮಕ್ಕಳಿಗೆ ಒಂದು ಭಾಗವನ್ನೂ ಕೊಡುತ್ತಿದ್ದನು.


ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು.


ಅವನಿಗಾಗಿ ಹಗ್ಗವು ನೆಲದ ಮೇಲೆ ಅಡಗಿಕೊಂಡಿರುತ್ತದೆ. ಅವನ ದಾರಿಯಲ್ಲಿ ಉರುಲು ಕಾದುಕೊಂಡಿರುತ್ತದೆ.


ಯೆಹೋವನು ಆಕಾಶದಲ್ಲಿ ಗುಡುಗಿದನು; ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು.


ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಆವರಿಸಿಕೊಳ್ಳುವುದು.


ನಿಮ್ಮ ಗತಿ ಹೀಗಾಗುವುದು. ನನ್ನ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನ್ನನ್ನು ಮರೆತುಬಿಟ್ಟಿರಿ. ಸುಳ್ಳುದೇವರುಗಳನ್ನು ನಂಬಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು