Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:7 - ಪರಿಶುದ್ದ ಬೈಬಲ್‌

7 ರಾಜನು ಮಾರ್ಗದಲ್ಲಿ ತೊರೆಯ ನೀರನ್ನು ಕುಡಿದು ಬಲ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತೊರೆಯ ನೀರನು ಕುಡಿವನಾ ಒಡೆಯ I ತಲೆಯೆತ್ತಿ ನಡೆವನು ಗಳಿಸಿ ವಿಜಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 [ಒಡೆಯನು] ದಾರಿಯಲ್ಲಿ ಹಳ್ಳದ ನೀರು ಕುಡಿದು ತಲೆಯೆತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕರ್ತ ಆಗಿರುವವರು ದಾರಿಯುದ್ದಕ್ಕೂ ಹಳ್ಳದಿಂದ ನೀರು ಕುಡಿಯುತ್ತಾ, ಜಯದ ಮಾರ್ಗದಲ್ಲಿ ತಲೆಯೆತ್ತಿ ನಡೆದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:7
16 ತಿಳಿವುಗಳ ಹೋಲಿಕೆ  

ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.


ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.


ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.


ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು! ತಂದೆಯು ನನಗೆ ಕೊಟ್ಟಿರುವ ಸಂಕಟದ ಪಾತ್ರೆಯನ್ನು ನಾನು ಸ್ವೀಕರಿಸಿಕೊಳ್ಳಬೇಕು” ಎಂದು ಹೇಳಿದನು.


ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು. ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು.


ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನ್ನು ಆ ವರ್ಷದ ಹನ್ನೆರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.


ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”


ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.


ದುಷ್ಟನು ತನ್ನ ಸ್ವಂತ ನಾಶನವನ್ನು ತಾನೇ ನೋಡಲಿ; ಸರ್ವಶಕ್ತನಾದ ದೇವರ ಕೋಪವನ್ನು ಅನುಭವಿಸಲಿ.


ನನ್ನ ದುಃಖವೇ ನನಗೆ ಆಹಾರವಾಯಿತು. ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಕ್ಕುತ್ತಿದೆ.


ಲೆಹೀಯ ನೆಲದಲ್ಲಿ ಒಂದು ಸುರಂಗವಿದೆ. ದೇವರು ಆ ಸುರಂಗವನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದನು. ಸಂಸೋನನು ನೀರು ಕುಡಿದು ಪುನಃ ಚೈತನ್ಯ ಪಡೆದನು. ಆದ್ದರಿಂದ ಅವನು ಆ ನೀರಿನ ಬುಗ್ಗೆಗೆ ಏನ್ ಹಕ್ಕೋರೇ ಎಂದು ಕರೆದನು. ಅದು ಇಂದಿಗೂ ಲೆಹೀ ನಗರದಲ್ಲಿ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು