Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:1 - ಪರಿಶುದ್ದ ಬೈಬಲ್‌

1 ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಲ್ಲೆಲೂಯ I ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು I ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾಹುವಿಗೆ ಸ್ತೋತ್ರ! ಯಾವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:1
25 ತಿಳಿವುಗಳ ಹೋಲಿಕೆ  

ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.


ನಿನ್ನ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸು. ಆ ಮಾರ್ಗವೇ ನನಗೆ ಬಹು ಇಷ್ಟ.


ಆತನು ತನ್ನ ಭಕ್ತರ ಇಷ್ಟವನ್ನು ನೆರವೇರಿಸುವನು. ಆತನು ಅವರ ಮೊರೆಗೆ ಕಿವಿಗೊಟ್ಟು ಅವರನ್ನು ರಕ್ಷಿಸುವನು.


ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.


ನನ್ನ ಅಂತರಂಗದಲ್ಲಿ ದೇವರ ನಿಯಮದ ವಿಷಯದಲ್ಲಿ ನಾನು ಸಂತೋಷಪಡುತ್ತೇನೆ.


ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು.


ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ!


ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು. ನಮ್ಮ ದೇವರನ್ನು ಸಂಕೀರ್ತಿಸಿರಿ. ಆತನನ್ನು ಸ್ತುತಿಸುವುದು ಒಳ್ಳೆಯದೂ ಸಂತೋಷಕರವೂ ಆಗಿದೆ.


ಕಷ್ಟಸಂಕಟಗಳು ನನಗೆ ಬಂದಿದ್ದವು. ನಿನ್ನ ಆಜ್ಞೆಗಳು ನನಗೆ ಆನಂದಕರವಾಗಿವೆ.


ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು.


ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ.


ನಾನು ನಿನ್ನ ಕಟ್ಟಳೆಗಳಲ್ಲಿ ಆನಂದಿಸುವೆನು, ನಿನ್ನ ಮಾತುಗಳನ್ನು ಮರೆಯುವುದಿಲ್ಲ.


ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಒಡಂಬಡಿಕೆಯನ್ನು ಅಭ್ಯಾಸ ಮಾಡುವುದರಲ್ಲಿ ಆನಂದಿಸುವೆನು.


ಯೆಹೋವನಿಗೆ ಸ್ತೋತ್ರವಾಗಲಿ! ನೀತಿವಂತರ ಸಭೆಯಲ್ಲಿ ನಾನು ಪೂರ್ಣಹೃದಯದಿಂದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವೆನು.


“ಯೆಹೋವನು ನಿಮ್ಮನ್ನು ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಆಶೀರ್ವದಿಸುವನು.


ರಾಜನಾದ ಅಹಾಬನು ಓಬದ್ಯನನ್ನು ತನ್ನ ಬಳಿಗೆ ಕರೆಯಿಸಿದನು. ಓಬದ್ಯನು ರಾಜನ ಅರಮನೆಯ ಮೇಲ್ವಿಚಾರಕನಾಗಿದ್ದನು. (ಓಬದ್ಯನು ಯೆಹೋವನ ನಿಜವಾದ ಹಿಂಬಾಲಕರಲ್ಲಿ ಒಬ್ಬನಾಗಿದ್ದನು.


ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹುಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು