Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:5 - ಪರಿಶುದ್ದ ಬೈಬಲ್‌

5 ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಯಾಳುವಾಗಿ ಧನಸಹಾಯಮಾಡುವವನೂ ತನ್ನ ಕಾರ್ಯಗಳನ್ನು ನೀತಿಯಿಂದ ನಡಿಸುವವನೂ ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:5
22 ತಿಳಿವುಗಳ ಹೋಲಿಕೆ  

ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ. ನೀತಿವಂತನಾದರೋ ಬೇರೆಯವರಿಗೆ ಉದಾರವಾಗಿ ಕೊಡುವನು.


ಆದ್ದರಿಂದ ನೀವು ಹೇಗೆ ಜೀವಿಸುತ್ತಿದ್ದೀರಿ ಎಂಬುದರ ಬಗ್ಗೆ ಬಹು ಎಚ್ಚರಿಕೆಯಿಂದಿರಿ. ಅವಿವೇಕಿಗಳಂತೆ ಜೀವಿಸದೆ ವಿವೇಕಿಗಳಾಗಿ ಜೀವಿಸಿರಿ.


ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು.


ನಿಮಗಾಗಿ ನಾನು ಪ್ರಾರ್ಥಿಸುವುದೇನೆಂದರೆ: ನೀವು ಪ್ರೀತಿಯಲ್ಲಿ ವೃದ್ಧಿಯಾಗುತ್ತಾ ಜ್ಞಾನವಂತರೂ ತಿಳುವಳಿಕೆಯುಳ್ಳವರೂ ಆಗಬೇಕು.


ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು.


ನೀವು ಪ್ರಭುವಿಗೋಸ್ಕರ ಸೇವೆಮಾಡುವುದು ಅಗತ್ಯವಿರುವಾಗ ಸೋಮಾರಿಗಳಾಗಿರಬೇಡಿರಿ. ಆತ್ಮಿಕವಾದ ಉತ್ಸಾಹದಿಂದ ಆತನ ಸೇವೆಮಾಡಿರಿ.


ನೀತಿವಂತನ ಪ್ರಾಣವನ್ನು ರಕ್ಷಿಸುವುದಕ್ಕಾಗಿ ಒಬ್ಬನು ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿರುವ ಒಬ್ಬನಿಗಾಗಿ ಪ್ರಾಣಕೊಡಲು ಒಬ್ಬನು ಧೈರ್ಯಮಾಡಿದರೂ ಮಾಡಬಹುದು.


ಅರಿಮಥಾಯ ಎಂಬುದು ಯೆಹೂದ್ಯರ ಒಂದು ಊರು. ಯೋಸೇಫನು ಇದರ ನಿವಾಸಿ. ಇವನು ಒಳ್ಳೆಯ ಧಾರ್ಮಿಕ ವ್ಯಕ್ತಿಯಾಗಿದ್ದನು. ದೇವರ ರಾಜ್ಯದ ಆಗಮನವನ್ನು ಇವನು ನಿರೀಕ್ಷಿಸಿದ್ದನು. ಯೋಸೇಫನು ಯೆಹೂದ್ಯರ ಹಿರಿಸಭೆಯ ಸದಸ್ಯನಾಗಿದ್ದನು. ಆದರೆ ಬೇರೆ ಯೆಹೂದ್ಯ ನಾಯಕರು ಯೇಸುವನ್ನು ಕೊಲ್ಲಲು ತೀರ್ಮಾನಿಸಿದಾಗ ಇವನು ಅದಕ್ಕೆ ಒಪ್ಪಲಿಲ್ಲ.


“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


ಮೂಢನು ಬೇರೊಬ್ಬನ ಸಾಲಕ್ಕೆ ಜಾಮೀನುಗಾರನಾಗುವನು.


ಯೆಹೋವನು ಒಳ್ಳೆಯವನನ್ನು ಸ್ವೀಕರಿಸಿಕೊಳ್ಳುವನು; ಕುಯುಕ್ತಿಯುಳ್ಳವನನ್ನು ಖಂಡಿಸುವನು.


ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ.


ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ.


ಸೋಮಾರಿಯು ನಾಶಮಾಡುವ ವ್ಯಕ್ತಿಯಂತಿದ್ದಾನೆ.


ಆದ್ದರಿಂದ ನಮ್ಮ ಜನರಲ್ಲಿ ಕೆಲವರನ್ನು ಕುಟಂಬ ಸಮೇತವಾಗಿ ಖಡ್ಗ, ಬರ್ಜಿ ಮತ್ತು ಬಿಲ್ಲುಗಳೊಡನೆ ಗೋಡೆಯ ಉದ್ದಕ್ಕೂ ಇದ್ದ ತಗ್ಗಾದ ಸ್ಥಳಗಳಲ್ಲಿಯೂ ಗೋಡೆಗಳಲ್ಲಿದ್ದ ಕಿಂಡಿಗಳ ಬಳಿಯಲ್ಲಿಯೂ ಇರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು