Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 118:27 - ಪರಿಶುದ್ದ ಬೈಬಲ್‌

27 ಯೆಹೋವನೇ ದೇವರು. ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು. ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 118:27
17 ತಿಳಿವುಗಳ ಹೋಲಿಕೆ  

ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು.


ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


“ಜೆರುಸಲೇಮೇ, ಏಳು, ಪ್ರಕಾಶಿಸು! ನಿನ್ನ ಪ್ರಕಾಶವೆಂಬಾತನು ಬರುತ್ತಾನೆ. ಯೆಹೋವನ ಮಹಿಮೆಯು ನಿನ್ನ ಮೇಲೆ ಪ್ರಕಾಶಿಸುವುದು.


ಈಗ ಅವರು ಕತ್ತಲಲ್ಲಿ ವಾಸಿಸುವರು. ಆದರೆ ಒಂದು ದೊಡ್ಡ ಬೆಳಕನ್ನು ಅವರು ನೋಡುವರು. ಅವರಿರುವ ಸ್ಥಳವು ಮರಣದ ಸ್ಥಳದಂತೆ ಅಂಧಕಾರದಿಂದ ತುಂಬಿದೆ. ಆದರೆ ದೊಡ್ಡ ಬೆಳಕು ಅವರ ಮೇಲೆ ಪ್ರಕಾಶಿಸುವದು.


ಯೆಹೂದ್ಯರಿಗೆ ಆ ದಿನ ಅತ್ಯಂತ ಸಂತೋಷದ ದಿನವಾಗಿತ್ತು. ಆ ದಿನ ಅವರಿಗೆ ಬಹಳ ಆನಂದ ಮತ್ತು ಹರ್ಷದ ದಿನವಾಗಿತ್ತು.


ನಿನ್ನ ನೀತಿಯೂ ನ್ಯಾಯವೂ ಮಧಾಹ್ನದ ಸೂರ್ಯನಂತೆ ಪ್ರಕಾಶಿಸಲಿ.


ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ.


ಅವನು ಯಜ್ಞವೇದಿಕೆಯ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬುಗಳನ್ನು ಇಟ್ಟು ಪ್ರತಿಯೊಂದೂ ಕೊಂಬನ್ನು ಅದರ ಮೂಲೆಗೆ ಸೇರಿಸಿದನು. ಹೀಗಾಗಿ ಪ್ರತಿಯೊಂದೂ ಅಖಂಡವಾದ ಒಂದೇ ವಸ್ತುವಿನಂತಾಯಿತು. ಅವನು ಯಜ್ಞವೇದಿಕೆಯನ್ನು ತಾಮ್ರದಿಂದ ಹೊದಿಸಿದನು.


ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು.


ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು.


ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ. ಆದ್ದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ. ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ. ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು