Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 118:9 - ಪರಿಶುದ್ದ ಬೈಬಲ್‌

9 ನಿಮ್ಮ ನಾಯಕರುಗಳಲ್ಲಿ ಭರವಸೆ ಇಡುವುದಕ್ಕಿಂತಲೂ ಯೆಹೋವನಲ್ಲಿ ಭರವಸೆ ಇಡುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ, ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ರಾಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪ್ರಭುಗಳಲ್ಲಿ ಭರವಸವಿಡುವದಕ್ಕಿಂತ ಯೆಹೋವನನ್ನು ಆಶ್ರಯಿಸುವದು ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಧಿಪತಿಗಳಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರ ಆಶ್ರಯ ಪಡೆಯುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 118:9
8 ತಿಳಿವುಗಳ ಹೋಲಿಕೆ  

ಇಸ್ರೇಲ್ ಜನರು ಈಜಿಪ್ಟಿನ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಅವರ ಕೈಗಳನ್ನೂ ಭುಜಗಳನ್ನೂ ಗಾಯಗೊಳಿಸಿತು. ನಿನ್ನ ಸಹಾಯಕ್ಕಾಗಿ ಅವರು ನಿನ್ನನ್ನು ಆಶ್ರಯಿಸಿದರು. ಆದರೆ ನೀನು ಅವರ ಬೆನ್ನೆಲುಬನ್ನು ತಿರುಗಿಸಿ ಮುರಿದುಬಿಟ್ಟೆ.’”


ಅಶ್ಶೂರವು ಕತ್ತಿಯಿಂದ ನಾಶವಾಗುವದು ಖಂಡಿತ. ಆದರೆ ಆ ಕತ್ತಿಯು ಮನುಷ್ಯನ ಕತ್ತಿಯಲ್ಲ. ಖಡ್ಗವು ಅವರನ್ನು ನುಂಗುವುದು, ಆದರೆ ಅದು ಮನುಷ್ಯನ ಖಡ್ಗವಲ್ಲ. ಅಶ್ಶೂರವು ದೇವರ ಖಡ್ಗದಿಂದ ಓಡಿಹೋಗುವದು. ಅದರ ಯೌವನಸ್ಥರು ಸೆರೆಹಿಡಿಯಲ್ಪಟ್ಟು ಗುಲಾಮರನ್ನಾಗಿ ಮಾಡಲ್ಪಡುವರು.


ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.


ಈಗ ಇಸ್ರೇಲರು ಹೇಳುವುದೇನೆಂದರೆ, “ನಮಗೆ ರಾಜನಿಲ್ಲ, ನಾವು ಯೆಹೋವನನ್ನು ಗೌರವಿಸುವದಿಲ್ಲ. ಆತನ ಅರಸನು ನಮಗೇನೂ ಮಾಡಲು ಸಾಧ್ಯವಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು