Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:109 - ಪರಿಶುದ್ದ ಬೈಬಲ್‌

109 ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

109 ನನ್ನ ಜೀವವು ಅಪಾಯದಲ್ಲಿದ್ದೆ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

109 ಕೈಯಲಿ ಜೀವ ಹಿಡಿದು ಕಳೆಯುತಿರುವೆ ಕಾಲವೆಲ್ಲ I ಆದರೂ ಪ್ರಭು, ನಾ ಧರ್ಮಶಾಸ್ತ್ರವನು ಮರೆತಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

109 ನಾನು ಯಾವಾಗಲೂ ಕೈಯಲ್ಲಿ ಜೀವ ಹಿಡಿದಿದ್ದೇನೆ; ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

109 ನನ್ನ ಜೀವನ ಆಗಾಗ ಅಪಾಯದಲ್ಲಿದೆ, ಆದಾಗ್ಯೂ ನಾನು ನಿಮ್ಮ ನಿಯಮವನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:109
11 ತಿಳಿವುಗಳ ಹೋಲಿಕೆ  

ನೀವು ನಮ್ಮ ಸಹಾಯಕ್ಕೆ ಬರುವುದಿಲ್ಲವೆಂದು ತಿಳಿದಾಗ ನಾನು ನನ್ನ ಜೀವವನ್ನೇ ಗಂಡಾಂತರಕ್ಕೆ ಒಡ್ಡಿದೆ. ಅಮ್ಮೋನಿಯರ ವಿರುದ್ಧ ಯುದ್ಧಮಾಡಲು ನಾನು ನದಿಯನ್ನು ದಾಟಿಹೋದೆ. ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯ ಮಾಡಿದನು. ಈಗ ನೀವು ನನ್ನ ಸಂಗಡ ಯುದ್ಧ ಮಾಡುವುದಕ್ಕಾಗಿ ಏಕೆ ಬಂದಿದ್ದೀರಿ?” ಎಂದು ಕೇಳಿದನು.


ನಾನು ಪ್ರತಿದಿನವೂ ಸಾಯುತ್ತೇನೆ. ಸಹೋದರರೇ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ಬಗ್ಗೆ ಹೆಮ್ಮೆಪಡುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಅದಾಗಿದೆ.


ನಾನು ನನ್ನನ್ನು ಅಪಾಯಕ್ಕೊಡ್ಡುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.


ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.


ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ನಿನಗೋಸ್ಕರವಾಗಿ ನಾವು ಎಲ್ಲಾ ಸಮಯಗಳಲ್ಲಿ ಸಾವಿನ ದವಡೆಯಲ್ಲಿದ್ದೇವೆ. ಕೊಯ್ಯಲು ಕೊಂಡೊಯ್ಯುವ ಕುರಿಗಳಿಗಿಂತ ಕಡೆಗಣಿಸಲ್ಪಟ್ಟಿದ್ದೇವೆ.”


ನಿನ್ನ ಉಪದೇಶಗಳು ಶಾಶ್ವತವಾಗಿವೆ. ಅದನ್ನು ನಾನು ಬಹುಕಾಲದ ಹಿಂದೆಯೇ ನಿನ್ನ ಒಡಂಬಡಿಕೆಯ ಮೂಲಕ ಕಲಿತುಕೊಂಡೆ.


ನನಗೆ ಸಹಾಯಮಾಡು, ಆಗ ನಾನು ರಕ್ಷಿಸಲ್ಪಡುವೆನು. ನಾನು ನಿನ್ನ ಕಟ್ಟಳೆಗಳನ್ನು ಯಾವಾಗಲೂ ಕಲಿಯುತ್ತಿರುವೆನು.


ಬಿಸಾಕಲ್ಪಟ್ಟ ದ್ರಾಕ್ಷಾರಸದ ಬುದ್ದಲಿಯಂತಿದ್ದೇನೆ, ಆದರೂ ನಾನು ನಿನ್ನ ಕಟ್ಟಳೆಗಳನ್ನು ಮರೆಯುವುದಿಲ್ಲ.


ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ನಾನು ನಿನ್ನ ಕಟ್ಟಳೆಗಳಲ್ಲಿ ಆನಂದಿಸುವೆನು, ನಿನ್ನ ಮಾತುಗಳನ್ನು ಮರೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು