Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:112 - ಪರಿಶುದ್ದ ಬೈಬಲ್‌

112 ನಿನ್ನ ಕಟ್ಟಳೆಗಳಿಗೆಲ್ಲಾ ಯಾವಾಗಲೂ ವಿಧೇಯನಾಗಿರಲು ಮನಸ್ಸುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

112 ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ. ಸಾಮೆಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

112 ಮನಸ್ಸುಮಾಡಿರುವೆ ಸದಾ ಕೈಗೊಂಡು ನಡೆಯಲು I ಜೀವಮಾನವೆಲ್ಲ ನಿನ್ನ ನಿಬಂಧನೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

112 ಕಡೇವರೆಗೂ ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದಕ್ಕೆ ಮನಸ್ಸುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

112 ನಿಮ್ಮ ತೀರ್ಪುಗಳನ್ನು ಕಡೆವರೆಗೂ ಪಾಲಿಸುವುದಕ್ಕೆ ನಾನು ನನ್ನ ಹೃದಯದಲ್ಲಿ ದೃಢಮಾಡಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:112
13 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು, ಆಗ ಅವುಗಳನ್ನು ಅನುಸರಿಸುವೆನು.


ಐಶ್ವರ್ಯದ ಮೇಲೆ ಮನಸ್ಸಿಡದೆ ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು.


ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.


ನಿನ್ನ ಉಪದೇಶಗಳನ್ನು ಎಂದೆಂದಿಗೂ ಅನುಸರಿಸುವೆನು.


ಈ ರೀತಿಯಲ್ಲಿ ನಾವು ಆತನ ಕಡೆಗೆ ತಿರುಗಿ, ಆತನನ್ನು ಅನುಸರಿಸುವಂತೆ ಆತನು ಮಾಡಲಿ. ಆತನು ನಮ್ಮ ಪೂರ್ವಿಕರಿಗೆ ನೀಡಿದ ಎಲ್ಲ ಕಟ್ಟಳೆಗಳಿಗೆ, ತೀರ್ಪುಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗಿರಲು ಆಗ ನಮಗೆ ಸಾಧ್ಯವಾಗುತ್ತದೆ.


ಆಗ ಯೆಹೋಶುವನು, “ಹಾಗಾದರೆ ನಿಮ್ಮಲ್ಲಿರುವ ಸುಳ್ಳುದೇವರುಗಳನ್ನು ಎಸೆದುಬಿಡಿ. ಇಸ್ರೇಲರ ದೇವರಾದ ಯೆಹೋವನ ಕಡೆಗೆ ನಿಮ್ಮ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದು ಹೇಳಿದನು.


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.


ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ ಇಚ್ಫೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯರಾಗುವಂತೆ ಇಸ್ರೇಲರೆಲ್ಲರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು.


ನಾನು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಯಾವಾಗಲೂ ಜ್ಞಾಪಿಸಿಕೊಳ್ಳುವೆ.


ಜ್ಞಾನಕ್ಕೆ ಕಿವಿಗೊಡು; ಅದನ್ನು ಅರ್ಥಮಾಡಿಕೊಳ್ಳಲು ನಿನ್ನಿಂದಾದಷ್ಟು ಪ್ರಯತ್ನಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು