Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:126 - ಪರಿಶುದ್ದ ಬೈಬಲ್‌

126 ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

126 ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

126 ಉಲ್ಲಂಘನೆಯಾಗಿದೆ ಪ್ರಭು, ನಿನ್ನ ಧರ್ಮಶಾಸ್ತ್ರ I ಸಮಯ ಬಂದೊದಗಿದೆ, ಆಗು ನೀನು ಕಾರ್ಯತತ್ಪರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

126 ಯೆಹೋವನೇ, ನೀನು ಕಾರ್ಯನಡಿಸುವದಕ್ಕೆ ಸಮಯಬಂದದೆ; ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

126 ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ, ಏಕೆಂದರೆ ನಿಮ್ಮ ನಿಯಮವು ಉಲ್ಲಂಘಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:126
14 ತಿಳಿವುಗಳ ಹೋಲಿಕೆ  

“‘“ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದ್ದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ. ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಬರೆದಿದ್ದಾರೆ.


ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.


ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ.


“ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳುಮಾಡಿಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ದೇವರು ವಾಗ್ದಾನ ಮಾಡಿದವುಗಳನ್ನು ಜನರು ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಹೊಂದಿಕೊಳ್ಳಬಲ್ಲವರಾಗಿದ್ದರೆ, ನಂಬಿಕೆಯು ನಿಷ್ಪ್ರಯೋಜಕವಾಗಿದೆ. ಅಲ್ಲದೆ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವೂ ನಿಷ್ಪ್ರಯೋಜಕವಾಗಿದೆ.


ಹೀಗಿರಲು, ನಂಬಿಕೆಯ ಮಾರ್ಗವನ್ನು ಅನುಸರಿಸುವುದರ ಮೂಲಕ ನಾವು ಧರ್ಮಶಾಸ್ತ್ರವನ್ನು ಅಲ್ಲಗಳೆಯುತ್ತೇವೋ? ಇಲ್ಲ! ನಾವು ಧರ್ಮಶಾಸ್ತ್ರವನ್ನು ಸಮರ್ಥಿಸುತ್ತೇವೆ.


ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. ಅವರು ಬಲಿಷ್ಠರಾಗಕೂಡದು.


“ನಾನು ಬಹುಕಾಲದಿಂದ ಮೌನವಾಗಿದ್ದೆನು. ನಾನು ಏನೂ ಹೇಳದ ಹಾಗೆ ನನ್ನನ್ನು ನಿಯಂತ್ರಿಸಿಕೊಂಡಿದ್ದೆನು. ಈಗ ನಾನು ಹೆರಿಗೆ ಬೇನೆಯನ್ನು ಅನುಭವಿಸುವ ಹೆಂಗಸಿನಂತೆ ಕಿರುಚುವೆನು; ಗಟ್ಟಿಯಾಗಿ ಏದುಸಿರು ಬಿಡುವೆನು.


ನೀನು ಎದ್ದು ಚೀಯೋನನ್ನು ಸಂತೈಸುವೆ. ನೀನು ಚೀಯೋನಿಗೆ ದಯೆತೋರುವ ಕಾಲ ಬರುತ್ತಿದೆ.


“ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.


ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ.


ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.


ನಿನ್ನ ಸೇವಕರು ಆಕೆಯ (ಜೆರುಸಲೇಮಿನ) ಕಲ್ಲುಗಳನ್ನು ಪ್ರೀತಿಸುವರು. ಅವರು ಆ ಪಟ್ಟಣದ ಧೂಳನ್ನು ಇಷ್ಟಪಡುವರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು