Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:9 - ಪರಿಶುದ್ದ ಬೈಬಲ್‌

9 ಯೌವನಸ್ಥನು ಪವಿತ್ರನಾಗಿ ಜೀವಿಸುವುದು ಯಾವುದರಿಂದ? ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವದು ಯಾವದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು? ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:9
29 ತಿಳಿವುಗಳ ಹೋಲಿಕೆ  

ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.


ಆದರೆ ನೀನು ಇನ್ನೊಂದು ವಿಷಯದಲ್ಲಿಯೂ ಸ್ಥಿರಚಿತ್ತನಾಗಿರಬೇಕು; ಧೈರ್ಯವಂತನಾಗಿರಬೇಕು. ನನ್ನ ಸೇವಕನಾಗಿದ್ದ ಮೋಶೆಯು ನಿನಗೆ ಕೊಟ್ಟ ಆಜ್ಞೆಗಳನ್ನು ನೀನು ನಿಶ್ಚಿತವಾಗಿ ಪಾಲಿಸಬೇಕು. ಅವನ ಧರ್ಮೋಪದೇಶವನ್ನೆಲ್ಲಾ ಚಾಚೂತಪ್ಪದೆ ಅನುಸರಿಸಿದ್ದೇ ಆದರೆ ನೀನು ಮಾಡುವ ಎಲ್ಲ ಕಾರ್ಯಗಳಲ್ಲಿ ನಿನಗೆ ಜಯಸಿಗುವುದು ಖಂಡಿತ.


ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.


ನಾನು ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ಉಪದೇಶಗಳನ್ನು ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ನನ್ನ ಮಗನೇ, ಪಾಪ ಮಾಡಬಯಸುವವರು ನಿನಗೆ ದುಷ್ಪ್ರೇರಣೆ ಮಾಡಿದರೆ ಅವರನ್ನು ಹಿಂಬಾಲಿಸಕೂಡದು.


ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ಯೆಹೋವನಲ್ಲಿ ನಿಮಗಿರಬೇಕಾದ ಭಯಭಕ್ತಿಯನ್ನು ಕಲಿಸಿಕೊಡುವೆನು.


ನಾನು ನಿಮಗೆ ಹೇಳಿದ ಉಪದೇಶದಿಂದ ನೀವು ಈಗಾಗಲೇ ಶುದ್ಧರಾಗಿದ್ದೀರಿ.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ಮಕ್ಕಳೇ, ನಿಮ್ಮ ತಂದೆಯ ಉಪದೇಶಗಳಿಗೆ ಕಿವಿಗೊಡಿ, ಗಮನವಿಟ್ಟು ಅರ್ಥಮಾಡಿಕೊಳ್ಳಿರಿ.


ಈ ಜ್ಞಾನೋಕ್ತಿಗಳು ಸಾಮಾನ್ಯರಿಗೆ ಜಾಣತನವನ್ನು ಯೌವನಸ್ಥರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುತ್ತವೆ.


ಅನೇಕ ಮೂಢ ಯೌವನಸ್ಥರನ್ನು ಕಂಡೆನು. ಅವರಲ್ಲಿ ತುಂಬಾ ಮೂಢನಾಗಿದ್ದ ಒಬ್ಬ ಯೌವನಸ್ಥನನ್ನು ಗಮನಿಸಿದೆ.


ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.


“ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು.


ಇಸ್ರೇಲರ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದರೆ, ನಿನ್ನ ಸಂತಾನದವರೇ ಇಸ್ರೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು.’ ಎಂದು ವಾಗ್ದಾನ ಮಾಡಿದೆಯಲ್ಲಾ?


ದೇವರೇ, ನೀನು ನನಗೆ ಕಠಿಣವಾದ ದಂಡನೆಗಳನ್ನು ವಿಧಿಸಿರುವೆ. ನನ್ನ ಯೌವನದ ಪಾಪಗಳ ದೆಸೆಯಿಂದ ನನ್ನನ್ನು ಸಂಕಟಪಡಿಸಿರುವೆ.


“ರಾಜನು ರಾಜ್ಯವಾಳಲು ಆರಂಭಿಸುವಾಗ, ಯಾಜಕರ ಮತ್ತು ಲೇವಿಯರ ಪುಸ್ತಕಗಳಿಂದ ಧರ್ಮಶಾಸ್ತ್ರವನ್ನು ತನಗಾಗಿ ಪುಸ್ತಕ ರೂಪದಲ್ಲಿ ಬರೆಸಿಟ್ಟುಕೊಳ್ಳಬೇಕು.


ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.


ವಿವೇಕವು ನಿನ್ನನ್ನು ಕಾಪಾಡುವುದು; ಬುದ್ಧಿಯು ನಿನಗೆ ಕಾವಲಾಗಿರುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು