Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 12:3 - ಪರಿಶುದ್ದ ಬೈಬಲ್‌

3 ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ವಂಚನೆಯ ತುಟಿಗಳನ್ನೂ ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೊಗಳಿಕೆಯ ಎಲ್ಲಾ ತುಟಿಗಳನ್ನೂ ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 12:3
26 ತಿಳಿವುಗಳ ಹೋಲಿಕೆ  

ಒಬ್ಬನ ಮಾತುಗಳು ಜೀವವನ್ನು ಉಳಿಸಬಲ್ಲವು ಅಥವಾ ಮರಣವನ್ನು ತರಬಲ್ಲವು. ಜನರು ತಮ್ಮ ಮಾತಿನ ಫಲವನ್ನು ಅನುಭವಿಸಲೇಬೇಕು.


ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡಲು ಅವಕಾಶ ನೀಡಲಾಯಿತು. ಆ ಮೃಗಕ್ಕೆ ಅದರ ಶಕ್ತಿಯನ್ನು ನಲವತ್ತೆರಡು ತಿಂಗಳ ಕಾಲ ಬಳಸಲು ಅವಕಾಶ ನೀಡಲಾಯಿತು.


“ನಾನು ಆ ಕೊಂಬುಗಳನ್ನು ನೋಡುತ್ತಿರಲು, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು, ಬೇರುಸಹಿತ ಕೀಳಲ್ಪಟ್ಟವು. ಈ ಚಿಕ್ಕ ಕೊಂಬಿನ ಮೇಲೆ ಕಣ್ಣುಗಳಿದ್ದವು. ಈ ಕಣ್ಣುಗಳು ಮನುಷ್ಯನ ಕಣ್ಣಿನಂತಿದ್ದವು. ಈ ಚಿಕ್ಕ ಕೊಂಬಿನ ಮೇಲೆ ಒಂದು ಬಾಯಿ ಇತ್ತು; ಆ ಬಾಯಿ ಜಂಬಕೊಚ್ಚಿಕೊಳ್ಳುತ್ತಿತ್ತು.


ಆ ದುಷ್ಟರು ಗರ್ವಿಷ್ಠರಾಗಿದ್ದಾರೆ. ಅವರು ಜಂಬಕೊಚ್ಚಿಕೊಳ್ಳುತ್ತಾರೆ.


ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.


ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.


ಯೆಹೋವನು ಹೀಗೆನ್ನುತ್ತಾನೆ, “ನೀವು ನನಗೆ ವಿರುದ್ಧವಾಗಿ ಹೇಯ ಮಾತುಗಳನ್ನಾಡಿದಿರಿ.” ಅದಕ್ಕೆ ನೀವು “ನಿನ್ನ ವಿರುದ್ಧವಾಗಿ ಏನು ಹೇಳಿದ್ದೇವೆ?” ಎಂದು ಕೇಳುತ್ತೀರಿ.


ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುವೆ.


ಆ ಮನುಷ್ಯನು ನಿನ್ನನ್ನು ಕೊಂದುಹಾಕುವನು. ಆಗಲೂ ನೀನು “ನಾನು ದೇವರು” ಎಂದು ಹೇಳುವಿಯಾ? ಇಲ್ಲ. ಅವನು ನಿನ್ನನ್ನು ತನ್ನ ಅಧಿಕಾರದಲ್ಲಿರಿಸುವನು. ಆಗ ನೀನು “ಕೇವಲ ಮನುಷ್ಯನೇ” ಎಂದು ತಿಳಿಯುವಿ.


“ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.


ಇನ್ನು ಮುಂದೆ ಬಡಾಯಿಕೊಚ್ಚಬೇಡಿ! ಸೊಕ್ಕಿನ ಮಾತುಗಳನ್ನು ಆಡಬೇಡಿ! ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು. ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ.


“‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.


ನಾನು ಆ ದುಷ್ಟರಾಜ್ಯಗಳನ್ನು ಸೋಲಿಸಿಬಿಟ್ಟೆನು, ಈಗ ನಾನು ಅವುಗಳನ್ನು ಆಳುತ್ತಿದ್ದೇನೆ. ಆ ಜನರು ಪೂಜಿಸುವ ವಿಗ್ರಹಗಳು ಜೆರುಸಲೇಮ್ ಮತ್ತು ಸಮಾರ್ಯಗಳಲ್ಲಿರುವ ವಿಗ್ರಹಗಳಿಗಿಂತ ವಿಶೇಷವಾಗಿವೆ.


ಮುಖಸ್ತುತಿ ಮಾಡುವುದೇ ನನಗೆ ತಿಳಿದಿಲ್ಲ. ಮುಖಸುತ್ತಿ ಮಾಡುವುದು ನನಗೆ ಗೊತ್ತಿದ್ದರೆ, ನನ್ನ ಸೃಷ್ಟಿಕರ್ತನು ನನ್ನನ್ನು ಬಹು ಬೇಗನೆ ಶಿಕ್ಷಿಸುವನು.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.


ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.


ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು.


ಕೆಡುಕನು ತಾನು ಹೇಳುವ ಸಂಗತಿಗಳ ಮೂಲಕ ತನ್ನನ್ನು ಒಳ್ಳೆಯವನನ್ನಾಗಿ ತೋರಿಸಿಕೊಳ್ಳುವನು. ಆದರೆ ಅವನು ತನ್ನ ಕೆಟ್ಟ ಆಲೋಚನೆಗಳನ್ನು ತನ್ನ ಹೃದಯದಲ್ಲಿ ಅಡಗಿಸಿಕೊಳ್ಳುವನು.


ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.


ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.


ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು