Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 123:2 - ಪರಿಶುದ್ದ ಬೈಬಲ್‌

2 ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದಾಸನ ಕಣ್ಣು ಯಜಮಾನನತ್ತ I ದಾಸಿಯ ಕಣ್ಣು ಯಜಮಾನಿಯತ್ತ II ನನ್ನ ಕಣ್ಣು ಸ್ವಾಮಿದೇವನತ್ತ I ಆತನ ಕಟಾಕ್ಷವನ್ನು ನಿರೀಕ್ಷಿಸುತ್ತಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಜಮಾನನ ಕೈಯನ್ನು ದಾಸನ ಕಣ್ಣುಗಳೂ ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳೂ ನೋಡುವ ಪ್ರಕಾರವೇ ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 123:2
14 ತಿಳಿವುಗಳ ಹೋಲಿಕೆ  

ನನ್ನ ಕಣ್ಣುಗಳು ಸಹಾಯಕ್ಕಾಗಿ ಯೆಹೋವನನ್ನೇ ದೃಷ್ಟಿಸುತ್ತಿವೆ. ಆತನು ನನ್ನನ್ನು ತೊಂದರೆಗಳಿಂದ ಖಂಡಿತವಾಗಿ ಬಿಡುಸುವನು.


“ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಗಾಗಿ ನಾನು ಕಾಯುತ್ತಿದ್ದೇನೆ.”


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:


ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು.


ನಿನ್ನ ವಾಗ್ದಾನಗಳಿಗಾಗಿ ಎದುರುನೋಡುತ್ತಾ ನನ್ನ ಕಣ್ಣುಗಳು ಆಯಾಸಗೊಳ್ಳುತ್ತಿವೆ. ನೀನು ಯಾವಾಗ ನನ್ನನ್ನು ಸಂತೈಸುವೆ?


ಗಿಲ್ಗಾಲಿನ ಪಾಳೆಯದಲ್ಲಿದ್ದ ಯೆಹೋಶುವನಿಗೆ ಗಿಬ್ಯೋನ್ ನಗರದ ಜನರು ಒಂದು ಸಂದೇಶವನ್ನು ಕಳಿಸಿದರು. ಆ ಸಂದೇಶ ಹೀಗಿತ್ತು: “ನಾವು ನಿಮ್ಮ ಸೇವಕರಾಗಿದ್ದೇವೆ, ನಮ್ಮನ್ನು ನಿಸ್ಸಹಾಯಕರಾಗಿ ಬಿಡಬೇಡಿರಿ. ಬಂದು ನಮಗೆ ಸಹಾಯ ಮಾಡಿರಿ; ತ್ವರೆಮಾಡಿರಿ; ನಮ್ಮನ್ನು ಉಳಿಸಿರಿ. ಬೆಟ್ಟಪ್ರದೇಶದ ಅಮೋರಿಯರ ಅರಸರೆಲ್ಲಾ ತಮ್ಮ ಸೈನ್ಯವನ್ನು ಒಟ್ಟುಗೂಡಿಸಿ ನಮ್ಮ ವಿರುದ್ಧ ಯುದ್ಧಮಾಡುತ್ತಿದ್ದಾರೆ.”


ಯೆಹೋಶುವನು ಗಿಬ್ಯೋನಿನ ಜನರನ್ನು ಇಸ್ರೇಲರ ಸೇವಕರನ್ನಾಗಿ ಮಾಡಿಕೊಂಡನು. ತನ್ನ ನಿವಾಸಕ್ಕಾಗಿ ಯೆಹೋವನು ಆರಿಸಿಕೊಳ್ಳುವ ಸ್ಥಳಗಳಲ್ಲಿ ಅವರು ಇಸ್ರೇಲರಿಗಾಗಿಯೂ ಯೆಹೋವನ ಯಜ್ಞವೇದಿಕೆಗಾಗಿಯೂ ಮರವನ್ನು ಕಡಿಯುತ್ತಿದ್ದರು ಮತ್ತು ನೀರನ್ನು ಹೊರುತ್ತಿದ್ದರು. ಆ ಜನರು ಇಂದಿಗೂ ಗುಲಾಮರಾಗಿಯೇ ಇದ್ದಾರೆ.


ಈಗ ನೀವು ಶಾಪಕ್ಕೆ ಗುರಿಯಾಗಿದ್ದೀರಿ. ದೇವರ ಮಂದಿರಕ್ಕಾಗಿ ಸೌಧೆಯನ್ನು ಕಡಿಯುವುದೂ ನೀರನ್ನು ಹೊರುವುದೂ ನಿಮಗೆಂದಿಗೂ ತಪ್ಪಿದ್ದಿಲ್ಲ” ಎಂದು ಹೇಳಿದನು.


ನನ್ನ ಒಡೆಯನಾದ ರಾಜನೇ, ನಿನ್ನ ನಂತರ ಯಾರು ರಾಜನಾಗಬೇಕೆಂಬ ನಿನ್ನ ತೀರ್ಮಾನಕ್ಕಾಗಿ ಇಸ್ರೇಲರೆಲ್ಲರೂ ಕಾಯುತ್ತಿದ್ದಾರೆ.


ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು