Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 123:4 - ಪರಿಶುದ್ದ ಬೈಬಲ್‌

4 ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೇಸತ್ತಿದೆ ಮನ ಗರ್ವಿಗಳ ನಿಂದೆಯಿಂದ I ಸುಖಭೋಗಿಗಳು ಮಾಡುವ ಅಪಹಾಸ್ಯದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಲೋಕಭೋಗಿಗಳ ಹಾಸ್ಯದಿಂದಲೂ ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾವು ಸುಖಭೋಗಿಗಳ ಗೇಲಿಯನ್ನೂ ಗರ್ವಿಷ್ಠರಿಂದ ತಿರಸ್ಕಾರವನ್ನೂ ಅನುಭವಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 123:4
16 ತಿಳಿವುಗಳ ಹೋಲಿಕೆ  

ಗರ್ವಿಷ್ಠರು ನನ್ನನ್ನು ಗೇಲಿಮಾಡುತ್ತಲೇ ಇದ್ದರು. ನಾನಾದರೋ ನಿನ್ನ ಉಪದೇಶಗಳನ್ನು ಅನುಸರಿಸುತ್ತಲೇ ಇದ್ದೆನು.


ಆಪತ್ತಿಗೆ ಗುರಿಯಾಗಿಲ್ಲದವರು ಆಪತ್ತಿನಿಂದ ಕಷ್ಟಪಡುತ್ತಿರುವ ಜನರನ್ನು ಗೇಲಿ ಮಾಡುವರು; ಜಾರಿಬಿದ್ದವನಿಗೆ ಹೊಡೆಯುವರು.


ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.


ಜನರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಮಾತಾಡುತ್ತಾರೆ. ನಾವಾದರೋ ಅವರಿಗೆ ಒಳ್ಳೆಯ ವಿಷಯಗಳನ್ನು ಹೇಳುತ್ತೇವೆ. ಇಂದಿನವರೆಗೂ ಜನರು ನಮ್ಮನ್ನು ಲೋಕದ ಕಸವೋ ಭೂಮಿಯ ಹೊಲಸೋ ಎಂಬಂತೆ ಪರಿಗಣಿಸಿದ್ದಾರೆ.


ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.


ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.


“ಮೋವಾಬಿನ ಸೊಕ್ಕಿನ ಬಗ್ಗೆ ನಾವು ಕೇಳಿದ್ದೇವೆ. ಅವನಿಗೆ ತುಂಬ ಸೊಕ್ಕು ಬಂದಿತ್ತು. ತಾನೇ ಮುಖ್ಯವಾದವನೆಂದು ಅವನು ಭಾವಿಸಿದ್ದನು. ಅವನು ಯಾವಾಗಲೂ ಬಡಾಯಿಕೊಚ್ಚಿಕೊಳ್ಳುತ್ತಿದ್ದನು. ಅವನು ತುಂಬಾ ಸೊಕ್ಕಿನವನಾಗಿದ್ದನು.”


“ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.”


ಸ್ತ್ರೀಯರೇ, ನೀವೀಗ ಶಾಂತರಾಗಿದ್ದೀರಿ. ಆದರೆ ನೀವು ಭಯಪಡುವವರಾಗಿರಬೇಕು. ನೀವು ಈಗ ಸುರಕ್ಷಿತರಾಗಿದ್ದೀರಿ, ಆದರೆ ನೀವು ಚಿಂತಿಸುವವರಾಗಿರಬೇಕು. ನಿಮ್ಮ ಒಳ್ಳೆಯ ವಸ್ತ್ರಗಳನ್ನು ತೆಗೆದಿಟ್ಟು ಶೋಕಬಟ್ಟೆಯನ್ನು ಧರಿಸಿರಿ. ಆ ಬಟ್ಟೆಗಳನ್ನು ನಿಮ್ಮ ಸೊಂಟಕ್ಕೆ ಕಟ್ಟಿಕೊಳ್ಳಿರಿ.


ಹೆಂಗಸರಲ್ಲಿ ಕೆಲವರು ಈಗ ಶಾಂತರಾಗಿದ್ದಾರೆ. ಈಗ ನೀವು ಸುರಕ್ಷಿತರಾಗಿದ್ದೀರಿ ಎಂದು ನಿಮಗೆ ಅನ್ನಿಸುತ್ತದೆ. ಆದರೆ ನೀವು ಸುಮ್ಮನಿದ್ದು ನಾನು ಹೇಳುವ ಮಾತುಗಳನ್ನು ಕೇಳಬೇಕು.


ನಿಮಗೆ ನನ್ನ ಸ್ಥಿತಿಯು ಬಂದಿದ್ದರೆ ನೀವು ಹೇಳಿದ್ದನ್ನೇ ನಾನು ಹೇಳಬಹುದಾಗಿತ್ತು. ನಿಮಗೆ ವಿರುದ್ಧವಾಗಿ ಜ್ಞಾನದ ಮಾತುಗಳನ್ನು ಹೇಳಿ ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.


ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೋ?” ಎಂದು ಕೇಳಿದರು.


(ಅಥೆನ್ಸಿನ ಎಲ್ಲಾ ಜನರು ಮತ್ತು ಅಲ್ಲಿ ವಾಸವಾಗಿದ್ದ ಬೇರೆ ದೇಶಗಳವರು ಹೊಸ ಆಲೋಚನೆಗಳ ಬಗ್ಗೆ ಮಾತಾಡುವುದಕ್ಕೂ ಕೇಳುವುದಕ್ಕೂ ಬಹಳ ಇಷ್ಟಪಡುತ್ತಿದ್ದರು.)


“ಮೋವಾಬೇ, ನೀನು ಇಸ್ರೇಲಿನ ಬಗ್ಗೆ ತಮಾಷೆ ಮಾಡಿದೆ. ಇಸ್ರೇಲ್ ಒಂದು ಕಳ್ಳರ ಗುಂಪಿನಿಂದ ಹಿಡಿಯಲ್ಪಟ್ಟಿತ್ತೇನು? ಇಸ್ರೇಲಿನ ಬಗ್ಗೆ ಮಾತನಾಡಿದಾಗಲೆಲ್ಲ ನೀನು ತಲೆಯಾಡಿಸಿದೆ. ಇಸ್ರೇಲಿಗಿಂತ ಉತ್ತಮನೋ ಎಂಬಂತೆ ನಟಿಸಿದೆ.


ಗೊಲ್ಯಾತನು ದಾವೀದನನ್ನು ನೋಡಿ ನಕ್ಕನು. ದಾವೀದನು ಸೈನಿಕನಲ್ಲವೆಂಬುದು ಗೊಲ್ಯಾತನಿಗೆ ಗೊತ್ತಾಯಿತು. ದಾವೀದನು ಕೆಂಬಣ್ಣದ ಸುಂದರ ಯುವಕನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು