Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 125:5 - ಪರಿಶುದ್ದ ಬೈಬಲ್‌

5 ದುಷ್ಟರು ಕುತಂತ್ರಗಳನ್ನು ಮಾಡುವರು. ಯೆಹೋವನು ಅವರನ್ನು ದಂಡಿಸುವನು. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 125:5
28 ತಿಳಿವುಗಳ ಹೋಲಿಕೆ  

ಅವರಿಗೆ ಸಮಾಧಾನದ ದಾರಿಯೇ ತಿಳಿಯದು. ಅವರ ಜೀವಿತದಲ್ಲಿ ಒಳ್ಳೆಯತನವೆಂಬುದು ಇಲ್ಲ. ಅವರ ಮಾರ್ಗವು ಕಪಟತನದಿಂದ ತುಂಬಿದೆ. ಅವರಂತೆ ಜೀವಿಸುವವರಿಗೆ ಶಾಂತಿಯೇ ಇರದು.


ಅವರ ಮಾರ್ಗಗಳು ವಕ್ರವಾಗಿವೆ; ಅವರ ನಡತೆಗಳು ದುರ್ನಡತೆಗಳಾಗಿವೆ.


ನೀನು ಜೀವದಿಂದಿದ್ದು ನಿನ್ನ ಮೊಮ್ಮಕ್ಕಳನ್ನು ಕಾಣುವಂತಾಗಲಿ. ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.


ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೋ ಅವನೇ ಧನ್ಯನು. ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು.


ಈ ನಿಯಮವನ್ನು ಅನುಸರಿಸುವವರಿಗೆಲ್ಲ, ಅಂದರೆ ನಿಜ ಇಸ್ರೇಲರಾದ ದೇವ ಜನರಿಗೆಲ್ಲ ಶಾಂತಿಯೂ ಕರುಣೆಯೂ ಆಗಲಿ.


“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.


ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.


ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ!


ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ನೀತಿವಂತನು ನಂಬಿಕೆಯಿಂದಲೇ ಜೀವವನ್ನು ಹೊಂದಿಕೊಳ್ಳುವನು. ಆದರೆ ಅವನು ಭಯದಿಂದ ಹಿಂಜರಿದರೆ ನಾನು ಅವನಲ್ಲಿ ಸಂತೋಷಪಡುವುದಿಲ್ಲ.”


ಕೆಲವರು ಯೆಹೋವನಾದ ನನ್ನಿಂದ ತೊಲಗಿಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”


“ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು.


ನಾನು ಸಮಾಧಾನದ ಒಡಂಬಡಿಕೆಯನ್ನು ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಬಡಿಕೆಯಾಗಿರುವದು. ನಾನು ಅವರ ಸ್ವದೇಶವನ್ನು ಹಿಂತಿರುಗಿಸಿ ಕೊಡುವೆನು. ಅವರನ್ನು ಅಭಿವೃದ್ಧಿಪಡಿಸಿ ಹೆಚ್ಚಿಸುವೆನು ಮತ್ತು ಅವರ ಮಧ್ಯೆ ನನ್ನ ಪವಿತ್ರ ಸ್ಥಳವನ್ನು ಇರಿಸುವೆನು. ಇದು ನಿರಂತರವಾದ ಒಡಂಬಡಿಕೆ.


ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ಯೆಹೋವನು ಹೇಳುವುದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ ನನ್ನ ಕೃಪೆಯು ನಿನ್ನನ್ನು ಎಂದಿಗೂ ತೊರೆಯದು. ನಾನು ನಿನ್ನೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿನಗೆ ಕರುಣೆಯನ್ನು ತೋರುವನು. ಈ ಸಂಗತಿಗಳನ್ನು ಆತನೇ ಹೇಳಿದ್ದಾನೆ.


ದುಷ್ಟರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ಸಂಪೂರ್ಣವಾಗಿ ದಂಡನೆ ಅನುಭವಿಸುವರು. ಆದರೆ ಸಜ್ಜನರು ತಮ್ಮ ಒಳ್ಳೆಯಕಾರ್ಯಗಳಿಗೆ ಸಂಪೂರ್ಣವಾಗಿ ಪ್ರತಿಫಲ ಪಡೆಯುವರು.


ಆ ಅಪರಾಧಿಗಳು ತಮ್ಮ ದುಷ್ಕೃತ್ಯಗಳ ಬಗ್ಗೆ ಇನ್ನೆಷ್ಟರವರೆಗೆ ಜಂಬ ಕೊಚ್ಚಿಕೊಳ್ಳುವರು?


ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.


ಆತನ ಮಾರ್ಗದಲ್ಲೇ ನಾನು ನಡೆದಿದ್ದೇನೆ. ನಾನು ಓರೆಯಾಗದೆ ಆತನ ಮಾರ್ಗವನ್ನೇ ಅನುಸರಿಸಿದ್ದೇನೆ.


ನಾನು ಆತನ ಮಾರ್ಗಗಳನ್ನೇ ಅನುಸರಿಸಿದೆನು. ನನ್ನ ದೇವರ ವಿರುದ್ಧ ನಾನು ಪಾಪವನ್ನು ಮಾಡಲಿಲ್ಲ.


ಯೆಹೋವನೇ, ನೀನಾದರೋ ಸದಾಕಾಲ ಸನ್ಮಾನ ಹೊಂದುವೆ.


ನನ್ನನ್ನಾದರೋ ನೀನು ಕಾಡುಕೋಣ ಬಲಿಷ್ಠನನ್ನಾಗಿ ಮಾಡಿರುವೆ. ನಿನ್ನ ಚೈತನ್ಯ ತೈಲವನ್ನು ನನ್ನ ಮೇಲೆ ಸುರಿದಾತನು ನೀನೇ.


ಜ್ಞಾನದ ಮಾರ್ಗವನ್ನು ತೊರೆದವನು ನಾಶನದ ಕಡೆಗೆ ಹೋಗುತ್ತಿರುವನು.


ಅದು ಆ ವ್ಯಕ್ತಿಯ ಬಳಿಗೆ ಹಿಂತಿರುಗಿ ಬಂದಾಗ, ಆ ಮನೆಯನ್ನು (ವ್ಯಕ್ತಿ) ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು