Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 126:1 - ಪರಿಶುದ್ದ ಬೈಬಲ್‌

1 ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸುಕಂಡವರಂತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 126:1
24 ತಿಳಿವುಗಳ ಹೋಲಿಕೆ  

ಯೆಹೂದವೇ, ನಿನಗೆ ಸುಗ್ಗೀಕಾಲವು ನೇಮಕವಾಗಿದೆ, ಸೆರೆವಾಸದಿಂದ ನನ್ನ ಜನರನ್ನು ನಾನು ಹಿಂತಿರುಗಿ ಕರೆತಂದಾಗ ಅದು ಸಂಭವಿಸುವದು.


“ಆ ಸಮಯದಲ್ಲಿ ನಾನು ಯೆಹೂದ ಮತ್ತು ಜೆರುಸಲೇಮನ್ನು ಸೆರೆಯಿಂದ ಹಿಂದಕ್ಕೆ ತರಿಸುವೆನು.


ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.


ದೇವದೂತನು ಹೊರಗೆ ಹೋದನು. ಪೇತ್ರನು ಅವನನ್ನು ಹಿಂಬಾಲಿಸಿದನು. ದೇವದೂತನು ನಿಜವಾಗಿಯೂ ಹೀಗೆ ಮಾಡುತ್ತಿದ್ದಾನೆಂಬುದು ಪೇತ್ರನಿಗೆ ತಿಳಿದಿರಲಿಲ್ಲ. ತಾನು ಕನಸು ಕಾಣುತ್ತಿರಬಹುದೆಂದು ಅವನು ಯೋಚಿಸಿಕೊಂಡನು.


ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.


ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು.


ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.


ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.


ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಇಸ್ರೇಲರೇ, ನನಗೆ ಉತ್ತರಹೇಳಿ.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.


“ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.


ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು?


ಶಿಷ್ಯರು ಅತ್ಯಾಶ್ಚರ್ಯಗೊಂಡರು ಮತ್ತು ಯೇಸುವನ್ನು ಜೀವಂತವಾಗಿ ಕಂಡು ಅತ್ಯಂತ ಸಂತೋಷಪಟ್ಟರು. ಆದರೆ ಅವರಿಗಿನ್ನೂ ನಂಬಲಾಗಲಿಲ್ಲ. ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದನು.


ನಾನು ಆತನಿಗೆ ಮೊರೆಯಿಟ್ಟಿದ್ದರೂ, ಆತನು ನನಗೆ ಉತ್ತರ ಕೊಟ್ಟಿದ್ದರೂ ಈಗ ಆತನು ನನಗೆ ಕಿವಿಗೊಡುತ್ತಾನೆ ಎಂಬುದರಲ್ಲಿ ನನಗೆ ನಂಬಿಕೆಯಿಲ್ಲ.


ಆದರೆ ಅಪೊಸ್ತಲರು ನಂಬಲಿಲ್ಲ. ಅವರಿಗೆ ಅದು ಹರಟೆಮಾತಾಗಿ ತೋರಿತು.


ಯೇಸು ಬದುಕಿರುವುದಾಗಿಯೂ ತಾನು ಆತನನ್ನು ನೋಡಿದ್ದಾಗಿಯೂ ಮರಿಯಳು ತಿಳಿಸಿದಾಗ ಶಿಷ್ಯರು ಅವಳನ್ನು ನಂಬಲಿಲ್ಲ.


ಆಗ ದೇವರಾದ ಯೆಹೋವನು ನಿಮ್ಮ ಮೇಲೆ ದಯೆ ತೋರಿಸುವನು. ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಎಲ್ಲಿ ಚದರಿಸಲ್ಪಟ್ಟಿದ್ದೀರೋ ಅಲ್ಲಿಂದ ತಿರುಗಿ ಹಿಂದಕ್ಕೆ ತರುವನು.


ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.


ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು!


ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.


ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು