Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 126:3 - ಪರಿಶುದ್ದ ಬೈಬಲ್‌

3 ಹೌದು, ನಾವು ಸಂತೋಷದಿಂದ್ದೇವೆ ಯಾಕೆಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ I ಎಂತಲೆ ನಾವಾನಂದಭರಿತರಾಗುವುದು ಉಚಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ; ಆದಕಾರಣ ಸಂತೋಷಿಸುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 126:3
19 ತಿಳಿವುಗಳ ಹೋಲಿಕೆ  

ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನ ಹೆಸರು ಅತಿ ಪರಿಶುದ್ಧವಾದದ್ದು.


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.


ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.


ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.


ಆ ಸಮಯದಲ್ಲಿ ಜನರು, “ನಮ್ಮ ದೇವರು ಇಲ್ಲಿದ್ದಾನೆ. ಆತನಿಗಾಗಿಯೇ ನಾವು ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸಲು ಬಂದಿದ್ದಾನೆ. ನಾವು ನಮ್ಮ ದೇವರಾದ ಯೆಹೋವನಿಗಾಗಿ ಕಾಯುತ್ತಿದ್ದೆವು. ಆತನು ನಮ್ಮನ್ನು ರಕ್ಷಿಸುವಾಗ ನಾವು ಹರ್ಷಭರಿತರಾಗಿ ಸಂತೋಷಿಸುವೆವು” ಎಂದು ಹೇಳುವರು.


ನನ್ನ ಯೆಹೋವನು ಹೀಗೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ ಪಶ್ಚಿಮ ದಿಕ್ಕಿನಿಂದಲೂ ಶತ್ರುಗಳನ್ನು ಹಿಡಿದು ತರುವೆನು.


ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.”


ದೇಶವೇ, ಭಯಪಡದಿರು. ಯೆಹೋವನು ಮಹತ್ಕಾರ್ಯವನ್ನು ಮಾಡಲಿರುವದರಿಂದ ಸಂತೋಷದಿಂದ ಆನಂದಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು