Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 127:1 - ಪರಿಶುದ್ದ ಬೈಬಲ್‌

1 ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮನೇ ಕಟ್ಟದಿದ್ದರೆ ಅದನ್ನು ಕಟ್ಟುವವರು ಕಷ್ಟಪಡುವದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ ಕಾವಲುಗಾರರು ಅದನ್ನು ಕಾಯುವದು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 127:1
35 ತಿಳಿವುಗಳ ಹೋಲಿಕೆ  

ಒಬ್ಬನು ಅನೇಕ ಯೋಜನೆಗಳನ್ನು ಮಾಡಿಕೊಂಡರೂ ಭವಿಷ್ಯತ್ತನ್ನು ನಿರ್ಧರಿಸುವವನು ಯೆಹೋವನೇ.


ಆದ್ದರಿಂದ ಬೀಜ ಬಿತ್ತುವವನಾಗಲಿ ನೀರು ಹಾಕುವವನಾಗಲಿ ಮುಖ್ಯನಲ್ಲ. ದೇವರೊಬ್ಬನು ಮಾತ್ರ ಮುಖ್ಯವಾದವನು, ಏಕೆಂದರೆ ಬೀಜಗಳನ್ನು ಬೆಳೆಯಿಸುವವನು ಆತನೊಬ್ಬನೇ.


ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಇಸ್ರೇಲರೇ, ನನಗೆ ಉತ್ತರಹೇಳಿ.


ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.


ಸೊಲೊಮೋನನೇ, ಆತನ ಪವಿತ್ರ ದೇವಾಲಯವನ್ನು ಕಟ್ಟಲು ದೇವರು ನಿನ್ನನ್ನು ಆರಿಸಿಕೊಂಡಿರುತ್ತಾನೆಂಬುದನ್ನು ನೀನು ತಿಳಿಯಬೇಕು. ಆದ್ದರಿಂದ ನೀನು ಬಲಗೊಂಡು ಕಾರ್ಯವನ್ನು ಸಂಪೂರ್ಣಗೊಳಿಸು.”


ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದುತನ್ನಿರಿ. ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು.


ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ.


ಕ್ರಿಸ್ತನು ಎದ್ದೇಬಂದಿಲ್ಲವಾದರೆ ನಮ್ಮ ಬೋಧನೆಗೂ ನಿಮ್ಮ ನಂಬಿಕೆಗೂ ಯಾವ ಬೆಲೆಯೂ ಇಲ್ಲ.


ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು?


ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು.


ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.


ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.


ಆತನು ತನ್ನ ಪವಿತ್ರಾಲಯವನ್ನು ಆ ಪರ್ವತದ ಮೇಲೆ ಕಟ್ಟಿ ಅದನ್ನು ಭೂಮಿಯಂತೆ ಶಾಶ್ವತಗೊಳಿಸಿದನು.


ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.


ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.


ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!


“ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.


“ಯೆಹೋವನಾದ ನಾನು ಆ ತೋಟವನ್ನು ಚೆನ್ನಾಗಿ ನೋಡಿಕೊಳ್ಳುವೆನು; ಸರಿಯಾದ ಕಾಲದಲ್ಲಿ ತೋಟಕ್ಕೆ ನೀರು ಹೊಯ್ಯುವೆನು. ಹಗಲಿರುಳು ತೋಟವನ್ನು ಕಾಯುವೆನು. ಆ ತೋಟವನ್ನು ಯಾರೂ ಹಾಳುಮಾಡುವದಿಲ್ಲ.


ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”


ನಿಮ್ಮ ವಿಷಯದಲ್ಲಿ ನನಗೆ ಭಯವಾಗಿದೆ. ನಿಮಗೋಸ್ಕರ ನಾನು ಪಟ್ಟ ಪ್ರಯಾಸವು ವ್ಯರ್ಥವಾಗುವುದೆಂಬ ಭಯ ನನಗಿದೆ.


ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು ಹೊಡೆದು ಗಾಯಮಾಡಿದರು. ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು ತೆಗೆದುಕೊಂಡರು.


ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು.


ಒಬ್ಬ ಸಂದೇಶಕನ ನಂತರ ಇನ್ನೊಬ್ಬ ಸಂದೇಶಕನು ಬರುವನು. ಸಂದೇಶಕರ ಮೇಲೆ ಸಂದೇಶಕರು ಬಂದು, ಇಡೀ ನಗರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಬಾಬಿಲೋನಿನ ರಾಜನಿಗೆ ತಿಳಿಸುತ್ತಾರೆ.


ದೇವರೇ, ನಿನ್ನಂತೆ ನ್ಯಾಯವಾಗಿ ತೀರ್ಪುನೀಡಲು ರಾಜನಿಗೆ ಕಲಿಸಿಕೊಡು. ನಿನ್ನ ನೀತಿಯನ್ನು ಕಲಿತುಕೊಳ್ಳಲು ರಾಜಕುಮಾರನಿಗೆ ಸಹಾಯಮಾಡು.


ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.


ಆಗ ಯಾರೋ ಒಬ್ಬರು ಜೆರಿಕೊ ನಗರದ ರಾಜನಿಗೆ, “ನಿನ್ನೆ ರಾತ್ರಿ ಇಸ್ರೇಲರ ಕಡೆಯ ಕೆಲವರು ನಮ್ಮ ದೇಶದ ದೌರ್ಬಲ್ಯಗಳನ್ನು ಕಂಡುಹಿಡಿಯುವುದಕ್ಕಾಗಿ ಬಂದಿದ್ದಾರೆ” ಎಂದು ಹೇಳಿದರು.


ಯೆಹೋವನು ತಾನು ವಾಗ್ದಾನ ಮಾಡಿದ್ದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಹೀರಾಮನ ಮತ್ತು ಸೊಲೊಮೋನನ ನಡುವೆ ಸಮಾಧಾನವಿತ್ತು. ಈ ಇಬ್ಬರು ರಾಜರುಗಳು ತಮ್ಮತಮ್ಮಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು