Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 13:3 - ಪರಿಶುದ್ದ ಬೈಬಲ್‌

3 ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 13:3
15 ತಿಳಿವುಗಳ ಹೋಲಿಕೆ  

“ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ.


ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು.


ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.


ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ನನ್ನ ಆಲೋಚನೆಗಳಿಗೆ ಗಮನಕೊಡು.


ಬಳಲಿಹೋಗಿದ್ದ ಜನರನ್ನು ಕಂಡ ಯೋನಾತಾನನು, “ನನ್ನ ತಂದೆಯು ದೇಶಕ್ಕೆ ತೊಂದರೆ ಮಾಡಿದನು. ನಾನು ಸ್ವಲ್ಪ ಜೇನನ್ನು ತಿಂದ ಮೇಲೆ ಎಷ್ಟೋ ಚೈತನ್ಯ ಬಂದಿತು.


ಆದರೆ ಯೋನಾತಾನನಿಗೆ ಈ ಶಾಪದ ಕುರಿತು ತಿಳಿದಿರಲಿಲ್ಲ; ತನ್ನ ತಂದೆಯು ಜನರಿಗೆ ಆಣೆಯಿಟ್ಟು ಹೇಳಿದ್ದೂ ಗೊತ್ತಿರಲಿಲ್ಲ. ಯೋನಾತಾನನ ಕೈಯಲ್ಲಿ ಒಂದು ಕೋಲಿತ್ತು. ಅವನು ಆ ಕೋಲನ್ನು ಜೇನುಗೂಡಿನಲ್ಲಿ ಚುಚ್ಚಿ ಸ್ವಲ್ಪ ಜೇನನ್ನು ತೆಗೆದುಕೊಂಡು ತಿಂದನು. ಆಗ ಅವನು ಸ್ವಲ್ಪ ಬಲಗೊಂಡನು.


ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು.


ಬಾಬಿಲೋನಿನ ಮುಖ್ಯ ಅಧಿಕಾರಿಗಳಿಗೂ ಪಂಡಿತರಿಗೂ ದ್ರಾಕ್ಷಾರಸ ಕುಡಿಯುವಂತೆ ಮಾಡುತ್ತೇನೆ. ಅಲ್ಲಿಯ ಅಧಿಪತಿಗಳಿಗೂ ಅಧಿಕಾರಿಗಳಿಗೂ ಸೈನಿಕರಿಗೂ ದ್ರಾಕ್ಷಾರಸ ಕುಡಿಸುತ್ತೇನೆ. ಆಮೇಲೆ ಅವರು ಶಾಶ್ವತವಾಗಿ ಮಲಗಿಬಿಡುತ್ತಾರೆ. ಅವರು ಎಚ್ಚರಗೊಳ್ಳುವುದೇ ಇಲ್ಲ.” ಸರ್ವಶಕ್ತನಾದ ಯೆಹೋವನೆಂಬ ನಾಮಧೇಯದ ರಾಜಾಧಿರಾಜನ ನುಡಿಯಿದು.


ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸು. ನಾನು ನಿನ್ನ ಉಪದೇಶಗಳನ್ನು ಮರೆತಿಲ್ಲ.


ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ.


ನನ್ನ ವೈರಿಗಳನ್ನೆಲ್ಲ ದೃಷ್ಟಿಸಿನೋಡು. ಅವರು ನನ್ನನ್ನು ದ್ವೇಷಿಸುತ್ತಾ ಕೇಡುಮಾಡಬೇಕೆಂದಿದ್ದಾರೆ.


“ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿ ಕಾಪಾಡು.”


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು