Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:16 - ಪರಿಶುದ್ದ ಬೈಬಲ್‌

16 ಆತನು ತನ್ನ ಜನರನ್ನು ಅರಣ್ಯದೊಳಗೆ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತನ್ನ ಪ್ರಜೆಯನು ಅರಣ್ಯಮಾರ್ಗವಾಗಿ ಕರೆತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರತಂದನು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತಮ್ಮ ಜನರನ್ನು ಮರುಭೂಮಿಯಲ್ಲಿ ನಡೆಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:16
11 ತಿಳಿವುಗಳ ಹೋಲಿಕೆ  

ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವುಗಳು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು.


ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ.


ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು.


ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


ಜನರಿಗೆ ಹಸಿವೆಯಾಗದು, ಬಾಯಾರಿಕೆಯಾಗದು. ಸೂರ್ಯನ ಉರಿ ಬಿಸಿಲಾಗಲಿ ಗಾಳಿಯಾಗಲಿ ಅವರಿಗೆ ಹಾನಿಮಾಡದು. ಯಾಕೆಂದರೆ ದೇವರು ತಾನೇ ಅವರನ್ನು ಸಂತೈಸುವನು, ಅವರನ್ನು ಬುಗ್ಗೆಗಳ ಬಳಿಗೆ ನಡಿಸುವನು.


ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.


ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವನ್ನು ಉಪಯೋಗಿಸಿದೆ. ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದಿ.


ನೀವು ಈ ಸ್ಥಳಕ್ಕೆ ಬರುವತನಕ ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಮರುಭೂಮಿಯಲ್ಲಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನೋಡಿದವರು, ನೀವೇ ಹೊರತು ನಿಮ್ಮ ಮಕ್ಕಳಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು