Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 137:1 - ಪರಿಶುದ್ದ ಬೈಬಲ್‌

1 ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿನ ನದಿಗಳ ತೀರದಲಿ ಕುಳಿತು I ಅತ್ತು ಪ್ರಲಾಪಿಸಿದೆವು ಸಿಯೋನನ್ನು ನೆನೆದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕೂತುಕೊಂಡು ಚೀಯೋನನ್ನು ನೆನಸಿ ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು, ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 137:1
27 ತಿಳಿವುಗಳ ಹೋಲಿಕೆ  

ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.


ಕೆಬಾರ್ ಕಾಲುವೆ ಪಕ್ಕದಲ್ಲಿದ್ದ ತೇಲ್ ಆಬೀಬ್‌ನಲ್ಲಿ ಸೆರೆಯಾಳುಗಳಾಗಿದ್ದ ಇಸ್ರೇಲ್ ಜನರ ಬಳಿಗೆ ನಾನು ಒಯ್ಯಲ್ಪಟ್ಟೆನು. ಅಲ್ಲಿದ್ದ ಜನರ ಮಧ್ಯೆ ನಾನು ಏಳು ದಿವಸ ಸ್ತಬ್ಧನಾಗಿದ್ದೆನು.


ಯೇಸು ಜೆರುಸಲೇಮಿನ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯದಲ್ಲಿ ಕಣ್ಣೀರಿಟ್ಟು


ನನ್ನ ಕಣ್ಣೀರು ತೊರೆಗಳಂತೆ ಹರಿಯುತ್ತಿದೆ! ನನ್ನ ಜನರು ನಾಶವಾದ ಕಾರಣ ನಾನು ಗೋಳಾಡುತ್ತಿರುವೆ!


ಜೆರುಸಲೇಮ್ ನಗರದ ಗೋಡೆಯೇ, ಮನಃಪೂರ್ವಕವಾಗಿ ಯೆಹೋವನಲ್ಲಿ ಮೊರೆಯಿಡು. ನಿನ್ನ ಕಣ್ಣೀರು ಹಗಲಿರುಳು ನದಿಯಂತೆ ಹರಿಯಲಿ, ನಿಲ್ಲಿಸಬೇಡ. ನಿನ್ನ ಕಣ್ಣುಗಳಿಗೆ ವಿರಾಮ ಸಿಗುವುದು ಬೇಡ.


“ನಾನು ಈ ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. ನನ್ನನ್ನು ಸಂತೈಸುವವರು ಯಾರೂ ಸಮೀಪದಲ್ಲಿ ಇಲ್ಲ; ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. ನನ್ನ ಮಕ್ಕಳು ಹಾಳುಬಿದ್ದ ಭೂಮಿಯಂತಿದ್ದಾರೆ. ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.”


ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.


ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.


ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.


ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನ ನಾವು ಅಹವಾ ನದಿಯ ದಡವನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ದೇವರು ನಮ್ಮೊಂದಿಗಿದ್ದು ಶತ್ರುಗಳಿಂದಲೂ ಕಳ್ಳರಿಂದಲೂ ನಮ್ಮನ್ನು ಸಂರಕ್ಷಿಸಿ ಕಾಪಾಡಿದನು.


ಅಹವಾ ನದಿಯ ದಡದಲ್ಲಿದ್ದಾಗ ನಮಗೆ ಸುಖ ಪ್ರಯಾಣ ದೊರೆಯುವಂತೆ ಎಲ್ಲಾ ತರದ ತೊಂದರೆಗಳಿಂದ ಪಾರು ಮಾಡುವಂತೆ ಮತ್ತು ನಮ್ಮಲ್ಲಿರುವ ಸ್ವತ್ತುಗಳನ್ನು ಕಾಪಾಡುವಂತೆ ನಮ್ಮ ದೇವರಲ್ಲಿ ದೀನತೆಯಿಂದ ಉಪವಾಸ ಪ್ರಾರ್ಥನೆ ಮಾಡಬೇಕೆಂದು ನೆರೆದುಬಂದ ಜನರಿಗೆ ಪ್ರಕಟಿಸಿದೆನು.


ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”


ಆಗ ನಾನು ದೇವರಾದ ನನ್ನ ಯೆಹೋವನನ್ನು ಪ್ರಾರ್ಥಿಸಿದೆ ಮತ್ತು ಆತನ ಸಹಾಯವನ್ನು ಕೋರಿದೆ. ನಾನು ಯಾವ ಆಹಾರವನ್ನೂ ಸ್ವೀಕರಿಸಲಿಲ್ಲ ಮತ್ತು ದುಃಖಸೂಚಕವಾದ ವಸ್ತ್ರಗಳನ್ನು ಧರಿಸಿಕೊಂಡೆ. ನನ್ನ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡೆ.


ನನ್ನ ಪಟ್ಟಣದ ಯುವತಿಯರಿಗೆ ಸಂಭವಿಸಿದ್ದನ್ನು ನಾನು ನೋಡುವಾಗಲೆಲ್ಲ ನನ್ನ ಕಣ್ಣುಗಳು ನನ್ನನ್ನು ದುಃಖಗೊಳಿಸುತ್ತವೆ.


ಜೆರುಸಲೇಮೇ, ಹರ್ಷಿಸು. ಜೆರುಸಲೇಮನ್ನು ಪ್ರೀತಿಸುವ ಜನರೇ, ಹರ್ಷಿಸಿರಿ. ಜೆರುಸಲೇಮಿಗೆ ದುಃಖಕೊಡುವ ವಿಷಯಗಳು ಜರುಗಿದ್ದರಿಂದ ನೀವು ದುಃಖಪಡುತ್ತಿದ್ದೀರಿ. ಆದರೆ ನೀವೀಗ ಸಂತೋಷಪಡಬೇಕು.


ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”


ಆ ಸಂದೇಶವಿದು, “ಯೆರೆಮೀಯನೇ, ನೀನು ಕೊಂಡ ತಂದು ಸುತ್ತಿಕೊಂಡ ನಡುಪಟ್ಟಿಯನ್ನು ತೆಗೆದುಕೊಂಡು ಪೆರಾತ್‌ಗೆ ಹೋಗು. ಆ ನಡುಪಟ್ಟಿಯನ್ನು ಬೆಟ್ಟದ ಸಂದಿನಲ್ಲಿ ಬಚ್ಚಿಡು.”


ಬಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. ಆದರೆ ಒಂದು ಜನಾಂಗವಾಗಿ ನೀನು ಬಹಳ ಕಾಲ ಮುಂದುವರೆಯಲಾರೆ. ನಿನ್ನ ವಿನಾಶ ಕಾಲ ಸಮೀಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು