Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 138:6 - ಪರಿಶುದ್ದ ಬೈಬಲ್‌

6 ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ; ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 138:6
23 ತಿಳಿವುಗಳ ಹೋಲಿಕೆ  

ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೋ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ಅರಸ ನೆಬೂಕದ್ನೆಚ್ಚರನಾದ ನಾನು ಈಗ ಪರಲೋಕದ ರಾಜನನ್ನು ಘನಪಡಿಸುತ್ತೇನೆ, ಮಹಿಮೆಪಡಿಸುತ್ತೇನೆ. ಆತನು ಮಾಡುವದೆಲ್ಲ ಸರಿ. ಆತನು ಯಾವಾಗಲೂ ನ್ಯಾಯವಂತನಾಗಿದ್ದಾನೆ. ಆತನು ಗರ್ವಿಷ್ಠರನ್ನು ದೀನರನ್ನಾಗಿ ಮಾಡಬಲ್ಲನು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ. ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.


ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆ ಮತ್ತು ವಿಧೇಯತೆಯುಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.


ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ. ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು