Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:18 - ಪರಿಶುದ್ದ ಬೈಬಲ್‌

18 ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ. ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವುಗಳನ್ನು ಲೆಕ್ಕಿಸುವದಾದರೆ [ಸಮುದ್ರದ] ಮರಳಿಗಿಂತ ಹೆಚ್ಚಾಗಿವೆ. ನಾನು ಎಚ್ಚರವಾಗಲು ಮುಂಚಿನಂತೆಯೇ ನಿನ್ನ ಬಳಿಯಲ್ಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಅವುಗಳನ್ನು ಎಣಿಸಿದರೆ, ಅವು ಮರಳಿಗಿಂತಲೂ ಹೆಚ್ಚಾಗಿವೆ! ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:18
11 ತಿಳಿವುಗಳ ಹೋಲಿಕೆ  

ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು.


ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ. ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.


ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.


ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ನಾವು ತನ್ನೊಂದಿಗೆ ಜೀವಿಸಲೆಂದು ಯೇಸು ನಮಗಾಗಿ ಸತ್ತನು. ಯೇಸು ಪ್ರತ್ಯಕ್ಷನಾದಾಗ, ನಾವು ಜೀವಿಸುತ್ತಿರುತ್ತೇವೋ ಇಲ್ಲವೆ ಸತ್ತಿರುತ್ತೇವೋ ಎಂಬುದು ಮುಖ್ಯವಲ್ಲ.


ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”


ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.


ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು