Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 14:2 - ಪರಿಶುದ್ದ ಬೈಬಲ್‌

2 ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 14:2
29 ತಿಳಿವುಗಳ ಹೋಲಿಕೆ  

ಅರ್ಥಮಾಡಿಕೊಳ್ಳುವ ಒಬ್ಬನೂ ಇಲ್ಲ. ದೇವರೊಂದಿಗಿರಲು ನಿಜವಾಗಿ ಬಯಸುವ ಒಬ್ಬನೂ ಇಲ್ಲ.


ನಂಬಿಕೆಯಿಲ್ಲದೆ ದೇವರನ್ನು ಯಾರೂ ಮೆಚ್ಚಿಸಲಾಗುವುದಿಲ್ಲ. ದೇವರ ಬಳಿಗೆ ಬರುವ ಯಾರೇ ಆಗಲಿ, ದೇವರು ಇದ್ದಾನೆಂತಲೂ ಆತನನ್ನು ಮನಃಪೂರ್ವಕವಾಗಿ ಹುಡುಕುವ ಜನರಿಗೆ ಆತನು ಪ್ರತಿಫಲವನ್ನು ಕೊಡುತ್ತಾನೆಂತಲೂ ನಂಬಬೇಕು.


ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.


ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’


ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.


“ಕಲಿತುಕೊಳ್ಳಬೇಕಾಗಿರುವ ಜನರೇ ಬನ್ನಿ” ಎಂದು ಕೂಗಿಕರೆಯುತ್ತಾಳೆ. ಅವಳು ಮೂಢರನ್ನು ಸಹ ಕರೆದು,


“ಅವರಿಗೆ ಏನೂ ಗೊತ್ತಿಲ್ಲ. ಅವರಿಗೆ ಏನೂ ಅರ್ಥವಾಗುವುದಿಲ್ಲ! ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು. ಅವರ ಪ್ರಪಂಚವು ಅವರ ಸುತ್ತಲೂ ಕುಸಿದುಬೀಳುತ್ತಿದೆ!”


ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?


ದೇವರು, “ನನ್ನ ಜನರು ಮೂರ್ಖರಾಗಿದ್ದಾರೆ. ಅವರು ನನ್ನನ್ನು ಅರಿಯದವರಾಗಿದ್ದಾರೆ. ಅವರು ಮೂಢ ಮಕ್ಕಳಾಗಿದ್ದಾರೆ. ಅವರು ಅವಿವೇಕಿಗಳಾಗಿದ್ದಾರೆ. ಅವರು ದುಷ್ಕೃತ್ಯದಲ್ಲಿ ನಿಪುಣರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡಲರಿಯದವರಾಗಿದ್ದಾರೆ” ಎಂದನು.


ಆದ್ದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


ಆಗ ನೀನು ಒಳ್ಳೆಯದನ್ನೂ ನ್ಯಾಯನೀತಿಗಳನ್ನೂ ಸನ್ಮಾರ್ಗಗಳನ್ನೂ ಅರ್ಥಮಾಡಿಕೊಳ್ಳುವೆ.


ನಿನಗೆ ಹೋಲಿಸಿದರೆ, ಜನರು ದಡ್ಡ ಪ್ರಾಣಿಗಳಂತಿದ್ದಾರೆ. ನಾವು ಯಾವುದನ್ನೂ ಅರ್ಥಮಾಡಿಕೊಳ್ಳಲಾಗದ ಮೂಢರಂತಿದ್ದೇವೆ.


ಯೆಹೋವನೇ, ಕೆಳಗಿರುವ ನಮ್ಮನ್ನು ನೀನು ಬಗ್ಗಿ ನೋಡುವತನಕ ನಾನು ಗೋಳಾಡುತ್ತಲೇ ಇರುವೆನು! ನೀನು ಪರಲೋಕದಿಂದ ನಮ್ಮನ್ನು ನೋಡುವತನಕ ನಾನು ಗೋಳಾಡುತ್ತಲೇ ಇರುವೆನು.


“ಕಲಿತುಕೊಳ್ಳಬೇಕಾಗಿರುವ ಜನರೇ, ಬನ್ನಿರಿ” ಎಂದು ಕೂಗುತ್ತಾಳೆ. ಆಕೆಯು ಬುದ್ಧಿಹೀನರಿಗೆ,


ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು.


ಆದ್ದರಿಂದ ನಾನು ಕೆಳಗಿಳಿದು ಅಲ್ಲಿಗೆ ಹೋಗಿ ನಾನು ಕೇಳಿದ್ದು ನಿಜವೇ ಎಂದು ಪರೀಕ್ಷಿಸುವೆನು” ಅಂದನು.


ಯೆಹೋವನು ಪಟ್ಟಣವನ್ನೂ ಗೋಪುರವನ್ನೂ ನೋಡಲು ಇಳಿದುಬಂದನು. ಜನರು ಅವುಗಳನ್ನು ಕಟ್ಟುತ್ತಿರುವುದನ್ನು ಕಂಡು


ನೀನು ಆಕಾಶವನ್ನು ಹರಿದು ಕೆಳಗೆ ಭೂಮಿಗಿಳಿದು ಬರುವದಾದರೆ ಎಲ್ಲವೂ ಬದಲಾಗುವದು. ಪರ್ವತಗಳು ನಿನ್ನ ಎದುರು ಕರಗಿಹೋಗುವವು.


ದೇವರನ್ನು ಆರಾಧಿಸಲು ಬಂದ ಬಡವರೇ, ಇದನ್ನು ಕೇಳಿ ಹರ್ಷಿಸಿರಿ.


“ಮನುಷ್ಯನು ಎಷ್ಟರವನು? ಅವನು ಪರಿಶುದ್ಧನಾಗಿರಲು ಸಾಧ್ಯವೇ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಲು ಸಾಧ್ಯವೇ?


ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.


ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು