Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:12 - ಪರಿಶುದ್ದ ಬೈಬಲ್‌

12 ಯೆಹೋವನು ದೀನರಿಗೆ ನ್ಯಾಯವಾದ ತೀರ್ಪನ್ನು ಪಾಲಿಸುತ್ತಾನೆಂದು ನನಗೆ ಗೊತ್ತಿದೆ. ದೇವರು ಅಸಹಾಯಕರಿಗೆ ಸಹಾಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ದೀನರ ವ್ಯಾಜ್ಯವನ್ನು ನಡಿಸುವನೆಂತಲೂ ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:12
16 ತಿಳಿವುಗಳ ಹೋಲಿಕೆ  

ನೀನು ನೀತಿವಂತನಾದ ನ್ಯಾಯಾಧಿಪತಿ. ಸಿಂಹಾಸನದ ಮೇಲೆ ಕುಳಿತು ನೀನು ನ್ಯಾಯತೀರಿಸುವೆ. ನೀನು ನನ್ನ ಮೊಕದ್ದಮೆಯನ್ನು ಕೇಳಿ ನನ್ನ ವಿಷಯದಲ್ಲಿ ತೀರ್ಪು ಮಾಡಿರುವೆ.


ನಿನ್ನ ನಿವಾಸವಾದ ಪರಲೋಕದಿಂದಲೇ ದಯವಿಟ್ಟು ಅವರ ಮೊರೆಯನ್ನು ಆಲಿಸಿ ಅವರ ನ್ಯಾಯವನ್ನು ಸ್ಥಾಪಿಸು.


ಆಗ ಪರಲೋಕದಿಂದಲೇ ನೀನು ಅವರ ಪ್ರಾರ್ಥನೆಗಳನ್ನು ಆಲಿಸಿ ಅವರಿಗೆ ಸಹಾಯ ಮಾಡು.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು. ಯೆಹೋಯಾಕೀಮನೇ, ‘ದೇವರನ್ನು ಅರಿತುಕೊಳ್ಳುವುದು ಎಂದರೇನು?’ ನ್ಯಾಯ ಮತ್ತು ನೀತಿಯಿಂದ ನಡೆದುಕೊಳ್ಳುವುದು, ನನ್ನನ್ನು ಅರಿತುಕೊಳ್ಳಲು ಬೇಕಾದದ್ದು ಅದೇ. ಇದು ಯೆಹೋವನಿಂದ ಬಂದ ಸಂದೇಶ:


ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.


ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, “ನಿನಗೆ ಸಮಾನರು ಇಲ್ಲವೇ ಇಲ್ಲ. ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ.”


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ.


ರಾಜನು ಬಡವರಿಗೆ ನ್ಯಾಯ ದೊರಕಿಸಿಕೊಡಲಿ; ನಿಸ್ಸಹಾಯಕರಿಗೆ ಸಹಾಯಮಾಡಲಿ. ಅವರಿಗೆ ಕೇಡುಮಾಡುವವರನ್ನು ರಾಜನು ದಂಡಿಸಲಿ.


ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.


ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ.


“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು