Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 143:10 - ಪರಿಶುದ್ದ ಬೈಬಲ್‌

10 ನಿನ್ನ ಇಚ್ಛೆಗನುಸಾರವಾಗಿ ನಾನು ಮಾಡಬೇಕಾದುದನ್ನು ನನಗೆ ತೋರಿಸಿಕೊಡು. ನೀನೇ ನನ್ನ ದೇವರು. ನನಗೆ ಒಳ್ಳೆಯವನಾಗಿದ್ದು ಸುರಕ್ಷಿತವಾದ ದಾರಿಯಲ್ಲಿ ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಚಿತ್ತದಂತೆ ನಡಕೊಳ್ಳುವದನ್ನು ನನಗೆ ಕಲಿಸು; ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಮಟ್ಟನೆಲದಲ್ಲಿ ನಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ, ಏಕೆಂದರೆ ನೀವು ನನ್ನ ದೇವರು; ನಿಮ್ಮ ಒಳ್ಳೆಯ ಆತ್ಮವು ನನ್ನನ್ನು ಸಮಹಾದಿಯಲ್ಲಿ ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 143:10
36 ತಿಳಿವುಗಳ ಹೋಲಿಕೆ  

ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.


ಆತನು ತನ್ನ ಹೆಸರಿಗೆ ತಕ್ಕಂತೆ ನನ್ನ ಪ್ರಾಣಕ್ಕೆ ಚೈತನ್ಯ ನೀಡಿ ನೀತಿಮಾರ್ಗದಲ್ಲಿ ನನ್ನನ್ನು ನಡೆಸುವನು.


ಯೆಹೋವನೇ, ನಿನಗೆ ಸ್ತೋತ್ರವಾಗಲಿ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.


ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ.


ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.


ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.


ಯೆಹೋವನೇ, ನನ್ನ ದೇವರು ನೀನೇ. ನನ್ನ ಪ್ರಾರ್ಥನೆಗೆ ಕಿವಿಗೊಡು.


ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ. ನೀನೇ ನನ್ನ ದೇವರು.


ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.


ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


ನಿನ್ನ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸು. ಆ ಮಾರ್ಗವೇ ನನಗೆ ಬಹು ಇಷ್ಟ.


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ಹೊಲದಲ್ಲಿ ನಡೆಯುತ್ತಿರುವಾಗ ಒಂದು ದನವೂ ಬೀಳಲಿಲ್ಲ. ಅದೇ ರೀತಿಯಲ್ಲಿ ಸಮುದ್ರದ ಮಧ್ಯದಲ್ಲಿ ನಡೆಯುವಾಗ ಅವರು ಬೀಳಲಿಲ್ಲ. ವಿಶ್ರಾಂತಿಯ ಸ್ಥಳಕ್ಕೆ ಯೆಹೋವನ ಆತ್ಮವು ಅವರನ್ನು ನಡೆಸಿತು. ದಾರಿಯುದ್ದಕ್ಕೂ ಜನರು ಸುರಕ್ಷಿತರಾಗಿದ್ದರು. ಯೆಹೋವನೇ, ಹೀಗೆ ನೀನು ನಿನ್ನ ಜನರನ್ನು ನಡೆಸಿದೆ. ಹೀಗೆ ನೀನು ನಿನ್ನ ಹೆಸರನ್ನು ಆಶ್ಚರ್ಯಕರವನ್ನಾಗಿ ಮಾಡಿರುವೆ.


ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಅತ್ಯುತ್ತಮವಾದ ಜೀವಮಾರ್ಗವನ್ನು ತೋರಿಸುವನು.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಂಡುಬರುತ್ತದೆ.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ನನ್ನಲ್ಲಿ ದುರಾಲೋಚನೆಗಳಿದ್ದರೆ ಕಂಡುಕೊ. ನನ್ನನ್ನು ಸನಾತನ ಮಾರ್ಗದಲ್ಲಿ ನಡೆಸು.


ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.


ಸಹೋದರ ಸಹೋದರಿಯರೇ, ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸುವುದರ ಮೂಲಕ ನನ್ನ ಸೇವೆಗೆ ಸಹಾಯ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಮ್ಮ ಪ್ರಭುವಾದ ಯೇಸುವಿನ ನಿಮಿತ್ತವಾಗಿಯೂ ಪವಿತ್ರಾತ್ಮನು ನಮಗೆ ಕೊಡುವ ಪ್ರೀತಿಯ ನಿಮಿತ್ತವಾಗಿಯೂ ನೀವು ಪ್ರಾರ್ಥಿಸಿರಿ.


ಯೆಹೋವನೇ, ನೀನೇ ನನ್ನ ದೇವರು; ನಾನು ನಿನಗೆ ಕೃತಜ್ಞತೆ ಸಲ್ಲಿಸುವೆನು. ನಾನು ನಿನ್ನನ್ನು ಘನಪಡಿಸುವೆನು!


ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ?


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


ಯೆಹೋವನು ನಿಮಗೆ ತೂಕಡಿಕೆ ಬರಮಾಡುವನು. ಆತನು ನಿಮ್ಮ ಕಣ್ಣುಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ಕಣ್ಣುಗಳಾಗಿದ್ದಾರೆ.) ಯೆಹೋವನು ನಿಮ್ಮ ತಲೆಗಳನ್ನು ಮುಚ್ಚುವನು. (ಪ್ರವಾದಿಗಳು ನಿಮ್ಮ ತಲೆಗಳಾಗಿದ್ದಾರೆ.)


ಆ ಮೇಘವು ಪವಿತ್ರಗುಡಾರದ ಮೇಲೆ ಎರಡು ದಿನವಾಗಲಿ ಒಂದು ತಿಂಗಳಾಗಲಿ ಒಂದು ವರ್ಷವಾಗಲಿ ನಿಂತರೆ ಅದು ನಿಂತಿರುವ ತನಕ ಇಸ್ರೇಲರು ಪ್ರಯಾಣ ಮಾಡದೆ ಇಳಿದುಕೊಂಡೇ ಇರುವರು. ಅದು ಮೇಲಕ್ಕೆ ಎದ್ದಾಗ ಅವರು ಹೊರಡುವರು.


ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು