Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 146:4 - ಪರಿಶುದ್ದ ಬೈಬಲ್‌

4 ಮನುಷ್ಯರು ಸತ್ತು ಸಮಾಧಿಗೆ ಸೇರುವರು; ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಉಸಿರುಹೋದುದೇ ಮರಳುತ್ತಾನವನು ಮಣ್ಣಿಗೆ I ಅಂದೇ ಅಳಿಯುತ್ತದೆ ಅವನೆಲ್ಲಾ ಯೋಜನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನ ಉಸಿರು ಹೋಗಲು ಮಣ್ಣಿಗೆ ಸೇರುತ್ತಾನೆ; ಅವನ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ, ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 146:4
17 ತಿಳಿವುಗಳ ಹೋಲಿಕೆ  

ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.


ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ.


ಯೆಹೋವನು ಜನಾಂಗಗಳ ಉದ್ದೇಶಗಳನ್ನು ವ್ಯರ್ಥಗೊಳಿಸಬಲ್ಲನು; ಅವರ ಆಲೋಚನೆಗಳನ್ನು ನಿಷ್ಪಲ ಮಾಡಬಲ್ಲನು.


ಆದರೆ ಜೀವವು ನನ್ನೊಳಗಿರುವ ತನಕ, ದೇವರ ಜೀವಶ್ವಾಸವು ನನ್ನ ಮೂಗಿನಲ್ಲಿ ಇರುವವರೆಗೆ,


ನನ್ನ ಜೀವಿತವು ಮುಗಿದುಹೋಗುತ್ತಿದೆ, ನನ್ನ ಯೋಜನೆಗಳು ನಾಶವಾಗಿವೆ; ನನ್ನ ನಿರೀಕ್ಷೆಯು ಇಲ್ಲವಾಗಿದೆ.


ಅವನ ಮಕ್ಕಳಿಗೆ ಸನ್ಮಾನವಾದರೂ ಅವನಿಗೆ ತಿಳಿಯುವುದಿಲ್ಲ; ಅವರಿಗೆ ಅವಮಾನವಾದರೂ ಅವನಿಗೆ ಅದರ ಅರಿವೇ ಇರುವುದಿಲ್ಲ.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು.


ಜನರಿಗೆ ಜನ್ಮನೀಡುವಾತನೂ ನೀನೇ; ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ.


“ನನ್ನ ಆತ್ಮವು ಒಡೆದುಹೋಗಿದೆ; ನನ್ನ ಜೀವಿತವು ಮುಗಿದುಹೋಗಿದೆ; ಸಮಾಧಿಯು ನನಗೋಸ್ಕರ ಕಾಯುತ್ತಿದೆ.


ಮನುಷ್ಯನಾದರೋ ಸತ್ತು ಕೊನೆಗೊಳ್ಳುವನು. ಪ್ರಾಣ ಹೋದಾಗ ಇಲ್ಲವಾಗುವನು.


“ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.


ಅವರು ಸತ್ತಾಗಲೇ, ಅವರ ಪ್ರೀತಿ, ದ್ವೇಷ ಮತ್ತು ಹೊಟ್ಟೆಕಿಚ್ಚು ಅಳಿದುಹೋದವು; ಸತ್ತವರು ಭೂಲೋಕದ ಕಾರ್ಯಗಳಲ್ಲಿ ಇನ್ನೆಂದಿಗೂ ಪಾಲುಗಾರರಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು